• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search