• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search