• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ರಕ್ತದಾನ ಮಾಡಿ ನಾಯಿಯ ಜೀವ ಉಳಿಸಿದ ಘಟನೆ!

Tulunadu News Posted On August 1, 2024
0


0
Shares
  • Share On Facebook
  • Tweet It

ಮನುಷ್ಯರು ರಕ್ತದಾನ ಮಾಡುವುದನ್ನು ಕೇಳಿದ್ದೇವೆ. ಆದರೆ ಪ್ರಾಣಿಗಳೂ ರಕ್ತದಾನ ಮಾಡುತ್ತವೆಯಾ? ದಾನಗಳಲ್ಲಿ ರಕ್ತದಾನ ಶ್ರೇಷ್ಟದಾನವಾಗಿದ್ದು, ಪ್ರತಿಯೊಬ್ಬರು 60 ವರ್ಷ ಪ್ರಾಯದ ಒಳಗೆ ರಕ್ತದಾನ ಮಾಡಬಹುದು. ತುರ್ತು ಪರಿಸ್ಥಿತಿಯಲ್ಲಿ ರಕ್ತ ಸಿಗದೇ ಒದ್ದಾಡಿ ಸತ್ತವರ ಕಥೆಯನ್ನು ನೆನೆಯುವಾಗ ರಕ್ತದ ಮಹತ್ವ ತಿಳಿಯುತ್ತದೆ. ಹಾಗಿರುವಾಗ ರಕ್ತದಾನದ ಬಗ್ಗೆ ಜಾಗೃತಿಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಮನುಷ್ಯರು ರಕ್ತದಾನ ಶಿಬಿರವನ್ನು ಆಯೋಜಿಸುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಶ್ವಾನವೊಂದು ಇನ್ನೊಂದು ಶ್ವಾನಕ್ಕೆ ರಕ್ತದಾನ ಮಾಡಿರುವ ಕಥೆ ನಿಜಕ್ಕೂ ರೋಚಕವಾಗಿರುವಂತದ್ದು. ಇಂತಹ ಅಪರೂಪದಲ್ಲಿ ಅಪರೂಪ ಘಟನೆ ನಡೆದಿರುವುದು ಕೊಪ್ಪಳದಲ್ಲಿ. ಸಾಕಿದ ನಾಯಿಯೊಂದು ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತೊಂದು ನಾಯಿಗೆ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದೆ.
ಕೊಪ್ಪಳದ ಪಶು ಚಿಕಿತ್ಸಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ, ಹಿಮೋಗ್ಲೋಬಿನ್ ಶಕ್ತಿ ಕುಂದಿದ್ದ 9 ವರ್ಷದ ಲ್ಯಾಬರ್ ಡಾಗ್ ನಾಯಿಗೆ ರಕ್ತದ ಅವಶ್ಯಕತೆ ಉಂಟಾಗಿತ್ತು. ಆ ನಾಯಿಗೆ ಬೇರೆ ನಾಯಿಯ ರಕ್ತ ನೀಡಬೇಕಿತ್ತು. ವೈದ್ಯರು ನಗರದ ಮೂರು ನಾಯಿಗಳ ಮಾಲೀಕರನ್ನು ಸಂಪರ್ಕಿಸಿ ನಾಯಿಗಳ ರಕ್ತದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಿದರು.
ಪ್ರೊ. ಬಸವರಾಜ್ ಪೂಜಾರ್ ಅವರ ಮೂರು ವರ್ಷದ ಡಾಬರ್ ಮ್ಯಾನ್ ತಳಿಯ ರಕ್ತವು ಹೊಂದಿಕೆಯಾಗಿದ್ದು, ವೈದ್ಯಕೀಯ ನಿಯಮಾನುಸಾರ ಇದರ 300 ಎಂಎಲ್ ರಕ್ತವನ್ನು ಪರೀಕ್ಷಿಸಿದ ಬಳಿಕ ಕುತ್ತಿಗೆಯ ಭಾಗದಿಂದ ರಕ್ತ ಪಡೆದು ದೈಹಿಕವಾಗಿ ನಿತ್ರಾಣವಾಗಿದ್ದ ಲ್ಯಾಬರ್ ಡಾಗ್ ಗೆ ನೀಡಲಾಗಿದೆ.
ರಕ್ತ ಪೂರೈಕೆಯಾಗುವ ಪೈಪನ್ನು ಹಾಕಿಕೊಂಡಿರುವ ನಾಯಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ನೋಡುವಾಗ ನಿಜಕ್ಕೂ ಪಾಪ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search