• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ರಕ್ತದಾನ ಮಾಡಿ ನಾಯಿಯ ಜೀವ ಉಳಿಸಿದ ಘಟನೆ!

Tulunadu News Posted On August 1, 2024
0


0
Shares
  • Share On Facebook
  • Tweet It

ಮನುಷ್ಯರು ರಕ್ತದಾನ ಮಾಡುವುದನ್ನು ಕೇಳಿದ್ದೇವೆ. ಆದರೆ ಪ್ರಾಣಿಗಳೂ ರಕ್ತದಾನ ಮಾಡುತ್ತವೆಯಾ? ದಾನಗಳಲ್ಲಿ ರಕ್ತದಾನ ಶ್ರೇಷ್ಟದಾನವಾಗಿದ್ದು, ಪ್ರತಿಯೊಬ್ಬರು 60 ವರ್ಷ ಪ್ರಾಯದ ಒಳಗೆ ರಕ್ತದಾನ ಮಾಡಬಹುದು. ತುರ್ತು ಪರಿಸ್ಥಿತಿಯಲ್ಲಿ ರಕ್ತ ಸಿಗದೇ ಒದ್ದಾಡಿ ಸತ್ತವರ ಕಥೆಯನ್ನು ನೆನೆಯುವಾಗ ರಕ್ತದ ಮಹತ್ವ ತಿಳಿಯುತ್ತದೆ. ಹಾಗಿರುವಾಗ ರಕ್ತದಾನದ ಬಗ್ಗೆ ಜಾಗೃತಿಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಮನುಷ್ಯರು ರಕ್ತದಾನ ಶಿಬಿರವನ್ನು ಆಯೋಜಿಸುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಶ್ವಾನವೊಂದು ಇನ್ನೊಂದು ಶ್ವಾನಕ್ಕೆ ರಕ್ತದಾನ ಮಾಡಿರುವ ಕಥೆ ನಿಜಕ್ಕೂ ರೋಚಕವಾಗಿರುವಂತದ್ದು. ಇಂತಹ ಅಪರೂಪದಲ್ಲಿ ಅಪರೂಪ ಘಟನೆ ನಡೆದಿರುವುದು ಕೊಪ್ಪಳದಲ್ಲಿ. ಸಾಕಿದ ನಾಯಿಯೊಂದು ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತೊಂದು ನಾಯಿಗೆ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದೆ.
ಕೊಪ್ಪಳದ ಪಶು ಚಿಕಿತ್ಸಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ, ಹಿಮೋಗ್ಲೋಬಿನ್ ಶಕ್ತಿ ಕುಂದಿದ್ದ 9 ವರ್ಷದ ಲ್ಯಾಬರ್ ಡಾಗ್ ನಾಯಿಗೆ ರಕ್ತದ ಅವಶ್ಯಕತೆ ಉಂಟಾಗಿತ್ತು. ಆ ನಾಯಿಗೆ ಬೇರೆ ನಾಯಿಯ ರಕ್ತ ನೀಡಬೇಕಿತ್ತು. ವೈದ್ಯರು ನಗರದ ಮೂರು ನಾಯಿಗಳ ಮಾಲೀಕರನ್ನು ಸಂಪರ್ಕಿಸಿ ನಾಯಿಗಳ ರಕ್ತದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಿದರು.
ಪ್ರೊ. ಬಸವರಾಜ್ ಪೂಜಾರ್ ಅವರ ಮೂರು ವರ್ಷದ ಡಾಬರ್ ಮ್ಯಾನ್ ತಳಿಯ ರಕ್ತವು ಹೊಂದಿಕೆಯಾಗಿದ್ದು, ವೈದ್ಯಕೀಯ ನಿಯಮಾನುಸಾರ ಇದರ 300 ಎಂಎಲ್ ರಕ್ತವನ್ನು ಪರೀಕ್ಷಿಸಿದ ಬಳಿಕ ಕುತ್ತಿಗೆಯ ಭಾಗದಿಂದ ರಕ್ತ ಪಡೆದು ದೈಹಿಕವಾಗಿ ನಿತ್ರಾಣವಾಗಿದ್ದ ಲ್ಯಾಬರ್ ಡಾಗ್ ಗೆ ನೀಡಲಾಗಿದೆ.
ರಕ್ತ ಪೂರೈಕೆಯಾಗುವ ಪೈಪನ್ನು ಹಾಕಿಕೊಂಡಿರುವ ನಾಯಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ನೋಡುವಾಗ ನಿಜಕ್ಕೂ ಪಾಪ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search