• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ರಕ್ತದಾನ ಮಾಡಿ ನಾಯಿಯ ಜೀವ ಉಳಿಸಿದ ಘಟನೆ!

Tulunadu News Posted On August 1, 2024
0


0
Shares
  • Share On Facebook
  • Tweet It

ಮನುಷ್ಯರು ರಕ್ತದಾನ ಮಾಡುವುದನ್ನು ಕೇಳಿದ್ದೇವೆ. ಆದರೆ ಪ್ರಾಣಿಗಳೂ ರಕ್ತದಾನ ಮಾಡುತ್ತವೆಯಾ? ದಾನಗಳಲ್ಲಿ ರಕ್ತದಾನ ಶ್ರೇಷ್ಟದಾನವಾಗಿದ್ದು, ಪ್ರತಿಯೊಬ್ಬರು 60 ವರ್ಷ ಪ್ರಾಯದ ಒಳಗೆ ರಕ್ತದಾನ ಮಾಡಬಹುದು. ತುರ್ತು ಪರಿಸ್ಥಿತಿಯಲ್ಲಿ ರಕ್ತ ಸಿಗದೇ ಒದ್ದಾಡಿ ಸತ್ತವರ ಕಥೆಯನ್ನು ನೆನೆಯುವಾಗ ರಕ್ತದ ಮಹತ್ವ ತಿಳಿಯುತ್ತದೆ. ಹಾಗಿರುವಾಗ ರಕ್ತದಾನದ ಬಗ್ಗೆ ಜಾಗೃತಿಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಮನುಷ್ಯರು ರಕ್ತದಾನ ಶಿಬಿರವನ್ನು ಆಯೋಜಿಸುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಶ್ವಾನವೊಂದು ಇನ್ನೊಂದು ಶ್ವಾನಕ್ಕೆ ರಕ್ತದಾನ ಮಾಡಿರುವ ಕಥೆ ನಿಜಕ್ಕೂ ರೋಚಕವಾಗಿರುವಂತದ್ದು. ಇಂತಹ ಅಪರೂಪದಲ್ಲಿ ಅಪರೂಪ ಘಟನೆ ನಡೆದಿರುವುದು ಕೊಪ್ಪಳದಲ್ಲಿ. ಸಾಕಿದ ನಾಯಿಯೊಂದು ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತೊಂದು ನಾಯಿಗೆ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದೆ.
ಕೊಪ್ಪಳದ ಪಶು ಚಿಕಿತ್ಸಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ, ಹಿಮೋಗ್ಲೋಬಿನ್ ಶಕ್ತಿ ಕುಂದಿದ್ದ 9 ವರ್ಷದ ಲ್ಯಾಬರ್ ಡಾಗ್ ನಾಯಿಗೆ ರಕ್ತದ ಅವಶ್ಯಕತೆ ಉಂಟಾಗಿತ್ತು. ಆ ನಾಯಿಗೆ ಬೇರೆ ನಾಯಿಯ ರಕ್ತ ನೀಡಬೇಕಿತ್ತು. ವೈದ್ಯರು ನಗರದ ಮೂರು ನಾಯಿಗಳ ಮಾಲೀಕರನ್ನು ಸಂಪರ್ಕಿಸಿ ನಾಯಿಗಳ ರಕ್ತದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಿದರು.
ಪ್ರೊ. ಬಸವರಾಜ್ ಪೂಜಾರ್ ಅವರ ಮೂರು ವರ್ಷದ ಡಾಬರ್ ಮ್ಯಾನ್ ತಳಿಯ ರಕ್ತವು ಹೊಂದಿಕೆಯಾಗಿದ್ದು, ವೈದ್ಯಕೀಯ ನಿಯಮಾನುಸಾರ ಇದರ 300 ಎಂಎಲ್ ರಕ್ತವನ್ನು ಪರೀಕ್ಷಿಸಿದ ಬಳಿಕ ಕುತ್ತಿಗೆಯ ಭಾಗದಿಂದ ರಕ್ತ ಪಡೆದು ದೈಹಿಕವಾಗಿ ನಿತ್ರಾಣವಾಗಿದ್ದ ಲ್ಯಾಬರ್ ಡಾಗ್ ಗೆ ನೀಡಲಾಗಿದೆ.
ರಕ್ತ ಪೂರೈಕೆಯಾಗುವ ಪೈಪನ್ನು ಹಾಕಿಕೊಂಡಿರುವ ನಾಯಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ನೋಡುವಾಗ ನಿಜಕ್ಕೂ ಪಾಪ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search