• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

7 ತಿಂಗಳ ಗರ್ಭೀಣಿಗೆ ಒಲಿಂಪಿಕ್ಸ್ ಗೆಲುವು!

Tulunadu News Posted On August 1, 2024


  • Share On Facebook
  • Tweet It

ಈಜಿಪ್ಟ್ ರಾಷ್ಟ್ರದ ನಡಾ ಹಫೀಜ್ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಯುಎಸ್ ಎ ಒಕ್ಕೂಟದ ಎಲಿಜಬೆತ್ ಟಾರ್ಟಾಕೊವಸ್ಕಿ ಅವರನ್ನು ಮಹಿಳಾ ಕತ್ತಿವರಸೆ ವಿಭಾಗದಲ್ಲಿ ಸೋಲಿಸಿದ ಸುದ್ದಿ ಪ್ರಸಾರಗೊಂಡಾಗ ಅದರಲ್ಲಿ ಏನು ವಿಶೇಷತೆ ಇದೆ ಎಂದು ನಿಮಗೆ ಅನಿಸಬಹುದು. ಆದರೆ ಪಂದ್ಯ ಮುಗಿದ ಬಳಿಕ ವಿಜೇತೆ ನಡಾ ಹಫೀಜ್ ತನ್ನ ಇನ್ಟಾಗ್ರಾಂನಲ್ಲಿ ಹೇಳಿದ್ಳು ಓದಿದ ನಂತರ ಜಗತ್ತೆ ಒಮ್ಮೆ ಬೆಚ್ಚಿಬಿದ್ದಿತ್ತು. ” ಈ ಪಂದ್ಯ ಆಡುವಾಗ ನಾನು ಗರ್ಭದಲ್ಲಿ ಪುಟ್ಟ ಒಲಿಂಪಿಯನ್ ಹೊತ್ತುಕೊಂಡು ಆಡಿದೆ” ಎಂದು ಆಕೆ ಹೇಳಿದ್ದು ಕೇಳಿ ಎಲ್ಲರೂ ಮೂಕವಿಸ್ಮಿತರಾದರು.

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಆಕೆ ಈಗ ಏಳು ತಿಂಗಳ ಗರ್ಭೀಣಿ. ನಡಾ ಹಫೀಜ್ ಅವರಿಗೆ ಈಗ 26 ವರ್ಷ ವಯಸ್ಸು. ನಾನು ಆಟದ ಅಂಗಣದಲ್ಲಿ ಸ್ಪರ್ಧಿಸುವಾಗ ನನ್ನ ಜೊತೆ ಒಟ್ಟು ಮೂರು ಜನ ಇದ್ದರು. ಒಬ್ಬಳು ನಾನು, ಇನ್ನೊಬ್ಬಳು ಸ್ಪರ್ಧಿ, ಮತ್ತೊಂದು ಜೀವ ಹೊಟ್ಟೆಯಲ್ಲಿತ್ತು ಎಂದು ಅವಳು ಬರೆದಿದ್ದಾಳೆ.

” ನನ್ನ ಮಗು ಮತ್ತು ನನಗೆ ಈ ಪಂದ್ಯಾವಳಿಯಲ್ಲಿ ಭಾಗವಹಿಸುವಾಗ ಸಮಾನವಾದ ಸವಾಲುಗಳು ಇದ್ದವು. ಅದು ದೈಹಿಕ ಮತ್ತು ಭಾವನಾತ್ಮಕ ಏರಡೂ ಆಗಿದ್ದಿರಬಹುದು. ಆದರೆ ಬದುಕಿನ ಸಮಾನತೆಯನ್ನು ಮತ್ತು ಕ್ರೀಡೆಯ ಉತ್ಸಾಹವನ್ನು ಕಾಪಾಡಿಕೊಳ್ಳಲು ಶ್ರಮ ಅಗತ್ಯ ಇತ್ತು” ಎಂದು ಅವರು ಬರೆದಿದ್ದಾರೆ. ” ಮೊದಲ ಪಂದ್ಯ ಗೆದ್ದಾಗ ಬಹಳ ಹೆಮ್ಮೆ ಅನಿಸ್ತು. ಯಾಕೆಂದರೆ ನಾನು ಅಂತಿಮ 16 ರಲ್ಲಿದ್ದೆ” ಎಂದು ನಡಾ ಹೇಳಿದ್ದಾರೆ.
ಹಫೀಜ್ ಮುಂದುವರೆದು ಬರೆಯುತ್ತಾ ” ನಾನು ಬಹಳ ಅದೃಷ್ಟವಂತೆ. ಗಂಡ, ಕುಟುಂಬದ ಪ್ರೀತಿ ಸಿಕ್ಕಿದೆ. ಈ ಬಾರಿಯ ಒಲಿಂಪಿಕ್ಸ್ ತುಂಬಾ ವಿಭಿನ್ನವಾಗಿತ್ತು. ಈ ಬಾರಿ ಒಲಿಂಪಿಯನ್ ಹೊಟ್ಟೆಯಲ್ಲಿಯೂ ಇದ್ದ ಕಾರಣ ಆ ಖುಷಿಯೇ ಬೇರೆ”

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಗ್ರಾಮದಲ್ಲಿ ಆಯೋಜಕರು ನರ್ಸರಿಯೊಂದನ್ನು ನಡೆಸಿಕೊಂಡು ಬರುತ್ತಿದ್ದು, ಅಲ್ಲಿ ತಾಯಂದಿರು ನಮ್ಮ ಮಕ್ಕಳನ್ನು ಬಿಟ್ಟು ನಿಶ್ಚಿಂತೆಯಾಗಿ ಮೈದಾನಕ್ಕೆ ತೆರಳಬಹುದು. ಈ ಮೂಲಕ ಸ್ಪರ್ಧೆಯಲ್ಲಿ ಸಮಯ ಕಳೆಯುವಿಕೆ ಮತ್ತು ಮಕ್ಕಳೊಂದಿಗೆ ಉಳಿದ ಸಮಯ ವಿನಿಯೋಗಿಸುವಿಕೆ ಬಹಳ ಉತ್ತಮವಾಗಿರುತ್ತದೆ. ಮುಂದಿನ ಬಾರಿ ಹಫೀಜಾ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವಾಗ ಅವಳ ಮಗು ನಾಲ್ಕು ವರ್ಷ ಆಗಲಿದ್ದು, ಒಲಿಂಪಿಕ್ಸ್ ನರ್ಸರಿಯಲ್ಲಿ ಬಿಡಬಹುದು.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search