• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಕ್ಫ್ ಬೋರ್ಡ್ ಬಳಿ ಇರುವ ಆಸ್ತಿ 30 ಚಂಡಿಗಢದಷ್ಟು ಎಂದ ಯತ್ನಾಳ್!

Tulunadu News Posted On August 8, 2024


  • Share On Facebook
  • Tweet It

ವಕ್ಫ್ ( ತಿದ್ದುಪಡಿ ) ಮಸೂದೆ 2024 ಮಂಡಿಸಿರುವ ಕೇಂದ್ರ ಸರಕಾರದ ಈ ತೀರ್ಮಾನದ ನಂತರ ಲೋಕಸಭೆಯಲ್ಲಿ ವಾದ, ಪ್ರತಿವಾದಗಳ ಸರಣಿ ಜೋರಾಗಿ ನಡೆಯುತ್ತಿದ್ದರೆ ಇತ್ತ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡ ಕೇಂದ್ರ ಸರಕಾರದ ನಿಲುವಿನ ಬಗ್ಗೆ ಅಪಸ್ವರ ಎತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ” ಬಿಜೆಪಿಯವರು, ಎನ್ ಡಿಎ ಸರಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು. ಎನ್ ಡಿಎ ಸರಕಾರ ಜಾತ್ಯಾತೀತ ಸರಕಾರ ಅಲ್ಲ. ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ. ಎನ್ ಡಿಎ ಫಾಸಿಸ್ಟ್ ಮನಸ್ಥಿತಿ ಇರೋರು ಎಂದು ವಾಗ್ದಾಳಿ ನಡೆಸಿದರು. ಸಿದ್ಧರಾಮಯ್ಯನವರ ಈ ಹೇಳಿಕೆಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಜನತಾ ಪಾರ್ಟಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಮ್ಮ ಏಕ್ಸ್ ನಲ್ಲಿ ” ಕಾನೂನು ತಜ್ಞರು ಹಾಗೂ ಸಂವಿಧಾನ ತಜ್ಞರಾದ ಶ್ರೀಯುತ ಸಿದ್ಧರಾಮಯ್ಯನವರೇ ನಿಮಗೆ ಗೊತ್ತೆ?” ಎಂದು ಛೇಡಿಸಿದ್ದಾರೆ.

ವಕ್ಫ್ ಬೋರ್ಡ್ ಬಳಿ ಸುಮಾರು 8.66 ಲಕ್ಷ ಆಸ್ತಿಗಳಿವೆ. 8.02 ಲಕ್ಷ ಎಕರೆ ಒಡೆತನದ ಆಸ್ತಿ ಇರುವ ವಕ್ಫ್ ಎಂದರೆ ಸುಮಾರು 30 ಚಂಡೀಗಢದಷ್ಟು ಎಂದು ಅವರು ವಿಶ್ಲೇಷಿಸಿದ್ದಾರೆ. ಇನ್ನು ವಕ್ಫ್ ಟ್ರಿಬ್ಯೂನಲ್ ನಲ್ಲಿ ನೀಡಿದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯದಲ್ಲಿಯೂ ಪ್ರಶ್ನಿಸುವಂತಿಲ್ಲ. ಯತ್ನಾಳ್ ನೀಡಿರುವ ಇನ್ನೊಂದು ಅಂಶ ಎಂದರೆ ಮುಸಲ್ಮಾನ ಬಹುಸಂಖ್ಯಾತ ರಾಷ್ಟ್ರಗಳಲ್ಲಿಯೇ ವಕ್ಫ್ ಎಂಬ ಪರಿಕಲ್ಪನೆ ಇಲ್ಲ. ರಕ್ಷಣಾ ಇಲಾಖೆ ಹಾಗೂ ಭಾರತೀಯ ರೈಲ್ವೆ ಬಿಟ್ಟರೆ ಭಾರತದಲ್ಲಿ ಅತೀ ಹೆಚ್ಚು ಭೂಮಿಯ ಒಡೆತನ ಇರುವುದು ವಕ್ಫ್ ನಲ್ಲಿ. ಅದರೊಂದಿಗೆ ಈ ಕಾಯ್ದೆಯಿಂದ ಅತೀ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು ಎನ್ನುವ ಮಾತನ್ನು ಕೂಡ ಯತ್ನಾಳ್ ಹೇಳಿದ್ದಾರೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ತಿರುಚೆಂಥುರೈ ಹಳ್ಳಿಯಲ್ಲಿರುವ 1500 ವರ್ಷಗಳ ಇತಿಹಾಸವಿರುವ ಸುಂದರೇಶ್ವರ ಸ್ವಾಮಿ ದೇವಸ್ಥಾನದ ಮೇಲೂ ವಕ್ಫ್ ಮಂಡಳಿಯ ದೃಷ್ಟಿ ಬಿದ್ದಿದ್ದು, ದೇವಸ್ಥಾನದ 369 ಎಕರೆ ಸಂಪೂರ್ಣವಾಗಿ ವಕ್ಫ್ ಗೆ ಸೇರಿದ್ದು ಎಂದು ಹೇಳಿತ್ತು.
ಈ ರೀತಿಯಾದ ಏಕಪಕ್ಷೀಯವಾದ ಕಾನೂನು ಸಂವಿಧಾನದ ಆಶಯಗಳಿಗೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮೈನಾರಿಟಿ ವೋಟ್ ಬ್ಯಾಂಕ್ ಗೆ ಅಂಜಿಕೊಂಡು ವಕ್ಫ್ ಪರ ಹೇಳಿಕೆ ನೀಡುತ್ತಿದ್ದೀರಾ? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search