• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳ್ಳಿ ಪದಕವಾದರೂ ಕೊಡಿ, ವಿನೇಶ್ ಮನವಿ.. ಸಿಎಸ್ ಎ ಅರ್ಜಿ ವಿಚಾರಣೆ!

Tulunadu News Posted On August 8, 2024
0


0
Shares
  • Share On Facebook
  • Tweet It

ವಿನೇಶ್ ಪೋಗೋಟ್ ಅವರಿಗೆ ಬೆಳ್ಳಿಯಾದರೂ ಸಿಗುವ ಸಾಧ್ಯತೆ ಇದೆಯಾ? ಇಂತಹ ಒಂದು ಸಾಧ್ಯತೆಯನ್ನು ಏಕಾಏಕಿ ಅಲ್ಲಗಳೆಯಲು ಸಾಧ್ಯವಿಲ್ಲ. ಯಾಕೆಂದರೆ ಅವರ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಸ್ ಎ) ಸ್ವೀಕರಿಸಿದೆ. ವಿನೇಶ್ ಅವರ ಮನವಿಯ ವಿಚಾರಣೆ 5.30 ಕ್ಕೆ ಆರಂಭವಾಗಿದ್ದು, ವಿನೇಶ್ ಪರ ಜೊಯೆಲ್ ಮೊನ್ಲೂಯಿಸ್, ಎಸ್ಟೆಲ್ಲೆ ಇವನೊವಾ, ಹಬ್ಬೈನ್ ಎಸ್ಟೆಲ್ಲೆ ಕಿಮ್ ಮತ್ತು ಚಾಲ್ಸ್ ಆಮ್ಸನ್ ವಾದ ಮಂಡಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಯ 53 ಕೆಜಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿಗದಿಗಿಂತ ಹೆಚ್ಚಿನ ತೂಕ ಹೊಂದಿದ್ದಕ್ಕಾಗಿ ಫೈನಲ್ ಗೆ ಅರ್ಹತೆ ಪಡೆದುಕೊಳ್ಳಲು ವಿಫಲರಾಗಿದ್ದರು. ಇದರಿಂದಾಗಿ ಅವರ ಒಲಿಂಪಿಕ್ಸ್ ಚಿನ್ನದ ಪದಕದ ಆಸೆ ಕಮರಿ ಹೋಗಿತ್ತು. ನೀರು ಸೇವನೆಯಿಲ್ಲದೇ ದೇಹ ನಿರ್ಲಜೀಕರಣದಿಂದ, ಸರಿಯಾದ ಆಹಾರ ಸೇವನೆ ಇಲ್ಲದೇ ಬಳಲಿ ಬೆಂಡಾಗಿತ್ತು. ಅದರಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಬಳಿಕ ವಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಒಟ್ಟು ಘಟನೆಯಿಂದ ನೋವಿನ ಮಡುವಿಗೆ ಜಾರಿದ್ದ ವಿನೇಶ್ ಅವರು ಕುಸ್ತಿಗೆ ವಿದಾಯವನ್ನು ಘೋಷಿಸಿದ್ದರು. ಆದರೆ ಈಗ ಒಲಿಂಪಿಕ್ಸ್ ನಿಂದ ಬಂದ ಸುದ್ದಿಯಿಂದ ಕ್ರೀಡಾಪ್ರೇಮಿಗಳು ಸಂತಸದ ನಿಟ್ಟುಸಿರು ಬಿಡುವಂತಾಗಿದೆ. ವಿನೇಶ್ ಅವರಿಗೆ ಬೆಳ್ಳಿ ಪದಕ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search