• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ!

Tulunadu News Posted On August 8, 2024
0


0
Shares
  • Share On Facebook
  • Tweet It

ವಿಪರೀತ ಮಳೆಯಿಂದಾಗಿ ಸಂಭವಿಸಿದ ಗುಡ್ಡಕುಸಿತದ ಪರಿಣಾಮ ಮಂಗಳೂರು ಮತ್ತು ಬೆಂಗಳೂರು ನಡುವೆ ರೈಲು ಸಂಚಾರ ಬಂದ್ ಆಗಿತ್ತು. ಅದಕ್ಕೆ ಕಾರಣ ಸಕಲೇಶಪುರ – ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಭೂಕುಸಿತ. ಸದ್ಯ ಅಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಗುರುವಾರ ಯಶವಂತಪುರ – ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ ಎಕ್ಸಪ್ರೆಸ್ ರೈಲು ಆ ಮಾರ್ಗದಲ್ಲಿ ರೈಲಿನ ಸಂಚಾರ ಆರಂಭಿಸಿದೆ. ಈ ಮೂಲಕ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭವಾಗಿದೆ.
ಕಡಗರಹಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿದ್ದು, ರೈಲು ಸಂಚಾರ ಸ್ಥಗಿತವಾಗಿತ್ತು. ನಿರಂತರ ಮಳೆಯ ನಡುವೆಯೂ ಕ್ರಿಬ್ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗಿದೆ.

ಅಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ ಎಂಜಿನ ಓಡಿಸುವ ಮೂಲಕ ಸುರಕ್ಷತೆ ಪರಿಶೀಲಿಸಲಾಯಿತು. ಅಗಸ್ಟ್ 6 ರಂದು ಪೂರ್ಣ ಸಾಮಗ್ರಿ ಹೊತ್ತ ಗೂಡ್ಸ್ ರೈಲು ಈ ಮಾರ್ಗದಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಪ್ರಸ್ತುತ ಈ ಸ್ಥಳದಲ್ಲಿ ರೈಲಿನ ವೇಗದ ಮಿತಿಯನ್ನು 15 ಕಿ.ಮೀ ನಿಗದಿಗೊಳಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೈಲು ಮಾರ್ಗವನ್ನು ತ್ವರಿತಗತಿಯಲ್ಲಿ ದುರಸ್ತಿ ಮಾಡಿರುವುದಕ್ಕೆ ರೈಲ್ವೆ ಪ್ರಯಾಣಿಕರ ಪರವಾಗಿ ತುಳುನಾಡು ನ್ಯೂಸ್ ಆ ಎಲ್ಲಾ ಶ್ರಮಿಕ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸುತ್ತದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search