• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಡಿದ ವಿಶೇಷ ಮನವಿ ಏನು?

Tulunadu News Posted On August 12, 2024
0


0
Shares
  • Share On Facebook
  • Tweet It

ರಾಜ್ಯಸಭಾ ಸದಸ್ಯರಾಗಿರುವ ಶ್ರೀಮತಿ ಸುಧಾಮೂರ್ತಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅದು ಏನು ಎಂದು ಈಗ ತಿಳಿಯೋಣ. ನಮ್ಮ ದೇಶದಲ್ಲಿ ಪ್ರಸ್ತುತ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅದರ ಚಾಲಕ, ಮಾಲೀಕರಿಗೆ ಯಾವಾಗಲೂ ಇರುವ ಏಕೈಕ ಒತ್ತಡ ಎಂದರೆ ಬ್ಯಾಟರಿ ಮುಗಿದಾಗ ಏನು ಮಾಡುವುದು? ನಮಗೆ ಬ್ಯಾಟರಿ ಖಾಲಿಯಾಗುವ ಪರಿಸ್ಥಿತಿ ಬಂದಾಗ ಚಾರ್ಜಿಂಗ್ ಸ್ಟೇಶನ್ ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ಯಾವತ್ತೂ ಎದಿರಾಗಿರುತ್ತದೆ.


ಒಂದು ವೇಳೆ ಚಾರ್ಜಿಂಗ್ ಸ್ಟೇಶನ್ ಸಿಕ್ಕಾಗ ಅಲ್ಲಿ ದೊಡ್ಡ ಕ್ಯೂ ಇರುತ್ತದಾ? ಇದ್ದರೆ ಏನು ಮಾಡುವುದು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನು ಶೀತ ಸಮಯದಲ್ಲಿ ಬ್ಯಾಟರಿಗಳು ಸರಿಯಾಗಿ ಚಾರ್ಜ್ ಆಗುವುದಿಲ್ಲ, ಇಂತಹ ಆತಂಕ, ಸವಾಲುಗಳು ಕೂಡ ಇರುತ್ತವೆ. ಮೂರನೇಯದಾಗಿ ನಮ್ಮ ವಾಹನದ ಬ್ಯಾಟರಿ ಚಾರ್ಜ್ ಮಾಡಲು ಎಷ್ಟು ಸಮಯ ಬೇಕಾಗುತ್ತದೆ ಎನ್ನುವ ಯೋಚನೆಯೂ ಸುಳಿಯುತ್ತಾ ಇರುತ್ತದೆ.
ಇದಕ್ಕೆಲ್ಲಾ ಇರುವ ಅತ್ಯುತ್ತಮ ಪರಿಹಾರ ಎಂದರೆ ನಮ್ಮ ದೇಶದಲ್ಲಿ ನಾವೇ ಬ್ಯಾಟರಿಗಳ ಉತ್ಪಾದನೆ ಮಾಡುವ ಕಾರ್ಯಕ್ಕೆ ಮುಂದಾಗುವುದು. ಇದು ನಾವು ಸ್ವತಂತ್ರವಾಗಿ ಮತ್ತು ಯಾರ ಮೇಲೆಯೂ ಅವಲಂಬನೆ ಆಗದೇ ಇರುವ ಏಕೈಕ ವಿಧಾನವೂ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳಂತೆ ಯಾರ ಮೇಲೆಯೂ ನಾವು ಅವಲಂಬಿತರಾಗಿರಬೇಕಾಗಿಲ್ಲ. ಇನ್ನು ಉತ್ತಮ ಡಿಸೈನಿನ ಬ್ಯಾಟರಿಯಿಂದ ನಾವು ಉತ್ಪಾದಿಸುವ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ದೂರ ಚಲಿಸಲು ಸಾಧ್ಯವಾಗುತ್ತದೆ. ಇಂತಹ ವಿಚಾರಗಳನ್ನು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಮಂಡಿಸಿದ್ದಾರೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ಕೇಂದ್ರ ಸರಕಾರ ಈ ವಿಷಯದಲ್ಲಿಯೂ ಯೋಜನೆ ಹಾಕಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search