• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಡಿದ ವಿಶೇಷ ಮನವಿ ಏನು?

Tulunadu News Posted On August 12, 2024
0


0
Shares
  • Share On Facebook
  • Tweet It

ರಾಜ್ಯಸಭಾ ಸದಸ್ಯರಾಗಿರುವ ಶ್ರೀಮತಿ ಸುಧಾಮೂರ್ತಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅದು ಏನು ಎಂದು ಈಗ ತಿಳಿಯೋಣ. ನಮ್ಮ ದೇಶದಲ್ಲಿ ಪ್ರಸ್ತುತ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅದರ ಚಾಲಕ, ಮಾಲೀಕರಿಗೆ ಯಾವಾಗಲೂ ಇರುವ ಏಕೈಕ ಒತ್ತಡ ಎಂದರೆ ಬ್ಯಾಟರಿ ಮುಗಿದಾಗ ಏನು ಮಾಡುವುದು? ನಮಗೆ ಬ್ಯಾಟರಿ ಖಾಲಿಯಾಗುವ ಪರಿಸ್ಥಿತಿ ಬಂದಾಗ ಚಾರ್ಜಿಂಗ್ ಸ್ಟೇಶನ್ ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ಯಾವತ್ತೂ ಎದಿರಾಗಿರುತ್ತದೆ.


ಒಂದು ವೇಳೆ ಚಾರ್ಜಿಂಗ್ ಸ್ಟೇಶನ್ ಸಿಕ್ಕಾಗ ಅಲ್ಲಿ ದೊಡ್ಡ ಕ್ಯೂ ಇರುತ್ತದಾ? ಇದ್ದರೆ ಏನು ಮಾಡುವುದು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನು ಶೀತ ಸಮಯದಲ್ಲಿ ಬ್ಯಾಟರಿಗಳು ಸರಿಯಾಗಿ ಚಾರ್ಜ್ ಆಗುವುದಿಲ್ಲ, ಇಂತಹ ಆತಂಕ, ಸವಾಲುಗಳು ಕೂಡ ಇರುತ್ತವೆ. ಮೂರನೇಯದಾಗಿ ನಮ್ಮ ವಾಹನದ ಬ್ಯಾಟರಿ ಚಾರ್ಜ್ ಮಾಡಲು ಎಷ್ಟು ಸಮಯ ಬೇಕಾಗುತ್ತದೆ ಎನ್ನುವ ಯೋಚನೆಯೂ ಸುಳಿಯುತ್ತಾ ಇರುತ್ತದೆ.
ಇದಕ್ಕೆಲ್ಲಾ ಇರುವ ಅತ್ಯುತ್ತಮ ಪರಿಹಾರ ಎಂದರೆ ನಮ್ಮ ದೇಶದಲ್ಲಿ ನಾವೇ ಬ್ಯಾಟರಿಗಳ ಉತ್ಪಾದನೆ ಮಾಡುವ ಕಾರ್ಯಕ್ಕೆ ಮುಂದಾಗುವುದು. ಇದು ನಾವು ಸ್ವತಂತ್ರವಾಗಿ ಮತ್ತು ಯಾರ ಮೇಲೆಯೂ ಅವಲಂಬನೆ ಆಗದೇ ಇರುವ ಏಕೈಕ ವಿಧಾನವೂ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳಂತೆ ಯಾರ ಮೇಲೆಯೂ ನಾವು ಅವಲಂಬಿತರಾಗಿರಬೇಕಾಗಿಲ್ಲ. ಇನ್ನು ಉತ್ತಮ ಡಿಸೈನಿನ ಬ್ಯಾಟರಿಯಿಂದ ನಾವು ಉತ್ಪಾದಿಸುವ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ದೂರ ಚಲಿಸಲು ಸಾಧ್ಯವಾಗುತ್ತದೆ. ಇಂತಹ ವಿಚಾರಗಳನ್ನು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಮಂಡಿಸಿದ್ದಾರೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ಕೇಂದ್ರ ಸರಕಾರ ಈ ವಿಷಯದಲ್ಲಿಯೂ ಯೋಜನೆ ಹಾಕಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search