• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಡಿದ ವಿಶೇಷ ಮನವಿ ಏನು?

Tulunadu News Posted On August 12, 2024
0


0
Shares
  • Share On Facebook
  • Tweet It

ರಾಜ್ಯಸಭಾ ಸದಸ್ಯರಾಗಿರುವ ಶ್ರೀಮತಿ ಸುಧಾಮೂರ್ತಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅದು ಏನು ಎಂದು ಈಗ ತಿಳಿಯೋಣ. ನಮ್ಮ ದೇಶದಲ್ಲಿ ಪ್ರಸ್ತುತ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅದರ ಚಾಲಕ, ಮಾಲೀಕರಿಗೆ ಯಾವಾಗಲೂ ಇರುವ ಏಕೈಕ ಒತ್ತಡ ಎಂದರೆ ಬ್ಯಾಟರಿ ಮುಗಿದಾಗ ಏನು ಮಾಡುವುದು? ನಮಗೆ ಬ್ಯಾಟರಿ ಖಾಲಿಯಾಗುವ ಪರಿಸ್ಥಿತಿ ಬಂದಾಗ ಚಾರ್ಜಿಂಗ್ ಸ್ಟೇಶನ್ ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ಯಾವತ್ತೂ ಎದಿರಾಗಿರುತ್ತದೆ.


ಒಂದು ವೇಳೆ ಚಾರ್ಜಿಂಗ್ ಸ್ಟೇಶನ್ ಸಿಕ್ಕಾಗ ಅಲ್ಲಿ ದೊಡ್ಡ ಕ್ಯೂ ಇರುತ್ತದಾ? ಇದ್ದರೆ ಏನು ಮಾಡುವುದು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನು ಶೀತ ಸಮಯದಲ್ಲಿ ಬ್ಯಾಟರಿಗಳು ಸರಿಯಾಗಿ ಚಾರ್ಜ್ ಆಗುವುದಿಲ್ಲ, ಇಂತಹ ಆತಂಕ, ಸವಾಲುಗಳು ಕೂಡ ಇರುತ್ತವೆ. ಮೂರನೇಯದಾಗಿ ನಮ್ಮ ವಾಹನದ ಬ್ಯಾಟರಿ ಚಾರ್ಜ್ ಮಾಡಲು ಎಷ್ಟು ಸಮಯ ಬೇಕಾಗುತ್ತದೆ ಎನ್ನುವ ಯೋಚನೆಯೂ ಸುಳಿಯುತ್ತಾ ಇರುತ್ತದೆ.
ಇದಕ್ಕೆಲ್ಲಾ ಇರುವ ಅತ್ಯುತ್ತಮ ಪರಿಹಾರ ಎಂದರೆ ನಮ್ಮ ದೇಶದಲ್ಲಿ ನಾವೇ ಬ್ಯಾಟರಿಗಳ ಉತ್ಪಾದನೆ ಮಾಡುವ ಕಾರ್ಯಕ್ಕೆ ಮುಂದಾಗುವುದು. ಇದು ನಾವು ಸ್ವತಂತ್ರವಾಗಿ ಮತ್ತು ಯಾರ ಮೇಲೆಯೂ ಅವಲಂಬನೆ ಆಗದೇ ಇರುವ ಏಕೈಕ ವಿಧಾನವೂ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳಂತೆ ಯಾರ ಮೇಲೆಯೂ ನಾವು ಅವಲಂಬಿತರಾಗಿರಬೇಕಾಗಿಲ್ಲ. ಇನ್ನು ಉತ್ತಮ ಡಿಸೈನಿನ ಬ್ಯಾಟರಿಯಿಂದ ನಾವು ಉತ್ಪಾದಿಸುವ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ದೂರ ಚಲಿಸಲು ಸಾಧ್ಯವಾಗುತ್ತದೆ. ಇಂತಹ ವಿಚಾರಗಳನ್ನು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಮಂಡಿಸಿದ್ದಾರೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ಕೇಂದ್ರ ಸರಕಾರ ಈ ವಿಷಯದಲ್ಲಿಯೂ ಯೋಜನೆ ಹಾಕಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search