• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಡಿದ ವಿಶೇಷ ಮನವಿ ಏನು?

Tulunadu News Posted On August 12, 2024
0


0
Shares
  • Share On Facebook
  • Tweet It

ರಾಜ್ಯಸಭಾ ಸದಸ್ಯರಾಗಿರುವ ಶ್ರೀಮತಿ ಸುಧಾಮೂರ್ತಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅದು ಏನು ಎಂದು ಈಗ ತಿಳಿಯೋಣ. ನಮ್ಮ ದೇಶದಲ್ಲಿ ಪ್ರಸ್ತುತ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅದರ ಚಾಲಕ, ಮಾಲೀಕರಿಗೆ ಯಾವಾಗಲೂ ಇರುವ ಏಕೈಕ ಒತ್ತಡ ಎಂದರೆ ಬ್ಯಾಟರಿ ಮುಗಿದಾಗ ಏನು ಮಾಡುವುದು? ನಮಗೆ ಬ್ಯಾಟರಿ ಖಾಲಿಯಾಗುವ ಪರಿಸ್ಥಿತಿ ಬಂದಾಗ ಚಾರ್ಜಿಂಗ್ ಸ್ಟೇಶನ್ ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ಯಾವತ್ತೂ ಎದಿರಾಗಿರುತ್ತದೆ.


ಒಂದು ವೇಳೆ ಚಾರ್ಜಿಂಗ್ ಸ್ಟೇಶನ್ ಸಿಕ್ಕಾಗ ಅಲ್ಲಿ ದೊಡ್ಡ ಕ್ಯೂ ಇರುತ್ತದಾ? ಇದ್ದರೆ ಏನು ಮಾಡುವುದು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನು ಶೀತ ಸಮಯದಲ್ಲಿ ಬ್ಯಾಟರಿಗಳು ಸರಿಯಾಗಿ ಚಾರ್ಜ್ ಆಗುವುದಿಲ್ಲ, ಇಂತಹ ಆತಂಕ, ಸವಾಲುಗಳು ಕೂಡ ಇರುತ್ತವೆ. ಮೂರನೇಯದಾಗಿ ನಮ್ಮ ವಾಹನದ ಬ್ಯಾಟರಿ ಚಾರ್ಜ್ ಮಾಡಲು ಎಷ್ಟು ಸಮಯ ಬೇಕಾಗುತ್ತದೆ ಎನ್ನುವ ಯೋಚನೆಯೂ ಸುಳಿಯುತ್ತಾ ಇರುತ್ತದೆ.
ಇದಕ್ಕೆಲ್ಲಾ ಇರುವ ಅತ್ಯುತ್ತಮ ಪರಿಹಾರ ಎಂದರೆ ನಮ್ಮ ದೇಶದಲ್ಲಿ ನಾವೇ ಬ್ಯಾಟರಿಗಳ ಉತ್ಪಾದನೆ ಮಾಡುವ ಕಾರ್ಯಕ್ಕೆ ಮುಂದಾಗುವುದು. ಇದು ನಾವು ಸ್ವತಂತ್ರವಾಗಿ ಮತ್ತು ಯಾರ ಮೇಲೆಯೂ ಅವಲಂಬನೆ ಆಗದೇ ಇರುವ ಏಕೈಕ ವಿಧಾನವೂ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳಂತೆ ಯಾರ ಮೇಲೆಯೂ ನಾವು ಅವಲಂಬಿತರಾಗಿರಬೇಕಾಗಿಲ್ಲ. ಇನ್ನು ಉತ್ತಮ ಡಿಸೈನಿನ ಬ್ಯಾಟರಿಯಿಂದ ನಾವು ಉತ್ಪಾದಿಸುವ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ದೂರ ಚಲಿಸಲು ಸಾಧ್ಯವಾಗುತ್ತದೆ. ಇಂತಹ ವಿಚಾರಗಳನ್ನು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಮಂಡಿಸಿದ್ದಾರೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ಕೇಂದ್ರ ಸರಕಾರ ಈ ವಿಷಯದಲ್ಲಿಯೂ ಯೋಜನೆ ಹಾಕಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search