• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಡಿದ ವಿಶೇಷ ಮನವಿ ಏನು?

Tulunadu News Posted On August 12, 2024
0


0
Shares
  • Share On Facebook
  • Tweet It

ರಾಜ್ಯಸಭಾ ಸದಸ್ಯರಾಗಿರುವ ಶ್ರೀಮತಿ ಸುಧಾಮೂರ್ತಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅದು ಏನು ಎಂದು ಈಗ ತಿಳಿಯೋಣ. ನಮ್ಮ ದೇಶದಲ್ಲಿ ಪ್ರಸ್ತುತ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅದರ ಚಾಲಕ, ಮಾಲೀಕರಿಗೆ ಯಾವಾಗಲೂ ಇರುವ ಏಕೈಕ ಒತ್ತಡ ಎಂದರೆ ಬ್ಯಾಟರಿ ಮುಗಿದಾಗ ಏನು ಮಾಡುವುದು? ನಮಗೆ ಬ್ಯಾಟರಿ ಖಾಲಿಯಾಗುವ ಪರಿಸ್ಥಿತಿ ಬಂದಾಗ ಚಾರ್ಜಿಂಗ್ ಸ್ಟೇಶನ್ ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ಯಾವತ್ತೂ ಎದಿರಾಗಿರುತ್ತದೆ.


ಒಂದು ವೇಳೆ ಚಾರ್ಜಿಂಗ್ ಸ್ಟೇಶನ್ ಸಿಕ್ಕಾಗ ಅಲ್ಲಿ ದೊಡ್ಡ ಕ್ಯೂ ಇರುತ್ತದಾ? ಇದ್ದರೆ ಏನು ಮಾಡುವುದು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನು ಶೀತ ಸಮಯದಲ್ಲಿ ಬ್ಯಾಟರಿಗಳು ಸರಿಯಾಗಿ ಚಾರ್ಜ್ ಆಗುವುದಿಲ್ಲ, ಇಂತಹ ಆತಂಕ, ಸವಾಲುಗಳು ಕೂಡ ಇರುತ್ತವೆ. ಮೂರನೇಯದಾಗಿ ನಮ್ಮ ವಾಹನದ ಬ್ಯಾಟರಿ ಚಾರ್ಜ್ ಮಾಡಲು ಎಷ್ಟು ಸಮಯ ಬೇಕಾಗುತ್ತದೆ ಎನ್ನುವ ಯೋಚನೆಯೂ ಸುಳಿಯುತ್ತಾ ಇರುತ್ತದೆ.
ಇದಕ್ಕೆಲ್ಲಾ ಇರುವ ಅತ್ಯುತ್ತಮ ಪರಿಹಾರ ಎಂದರೆ ನಮ್ಮ ದೇಶದಲ್ಲಿ ನಾವೇ ಬ್ಯಾಟರಿಗಳ ಉತ್ಪಾದನೆ ಮಾಡುವ ಕಾರ್ಯಕ್ಕೆ ಮುಂದಾಗುವುದು. ಇದು ನಾವು ಸ್ವತಂತ್ರವಾಗಿ ಮತ್ತು ಯಾರ ಮೇಲೆಯೂ ಅವಲಂಬನೆ ಆಗದೇ ಇರುವ ಏಕೈಕ ವಿಧಾನವೂ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳಂತೆ ಯಾರ ಮೇಲೆಯೂ ನಾವು ಅವಲಂಬಿತರಾಗಿರಬೇಕಾಗಿಲ್ಲ. ಇನ್ನು ಉತ್ತಮ ಡಿಸೈನಿನ ಬ್ಯಾಟರಿಯಿಂದ ನಾವು ಉತ್ಪಾದಿಸುವ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ದೂರ ಚಲಿಸಲು ಸಾಧ್ಯವಾಗುತ್ತದೆ. ಇಂತಹ ವಿಚಾರಗಳನ್ನು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಮಂಡಿಸಿದ್ದಾರೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ಕೇಂದ್ರ ಸರಕಾರ ಈ ವಿಷಯದಲ್ಲಿಯೂ ಯೋಜನೆ ಹಾಕಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search