• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಡಿದ ವಿಶೇಷ ಮನವಿ ಏನು?

Tulunadu News Posted On August 12, 2024
0


0
Shares
  • Share On Facebook
  • Tweet It

ರಾಜ್ಯಸಭಾ ಸದಸ್ಯರಾಗಿರುವ ಶ್ರೀಮತಿ ಸುಧಾಮೂರ್ತಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಅದು ಏನು ಎಂದು ಈಗ ತಿಳಿಯೋಣ. ನಮ್ಮ ದೇಶದಲ್ಲಿ ಪ್ರಸ್ತುತ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅದರ ಚಾಲಕ, ಮಾಲೀಕರಿಗೆ ಯಾವಾಗಲೂ ಇರುವ ಏಕೈಕ ಒತ್ತಡ ಎಂದರೆ ಬ್ಯಾಟರಿ ಮುಗಿದಾಗ ಏನು ಮಾಡುವುದು? ನಮಗೆ ಬ್ಯಾಟರಿ ಖಾಲಿಯಾಗುವ ಪರಿಸ್ಥಿತಿ ಬಂದಾಗ ಚಾರ್ಜಿಂಗ್ ಸ್ಟೇಶನ್ ಎಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ಯಾವತ್ತೂ ಎದಿರಾಗಿರುತ್ತದೆ.


ಒಂದು ವೇಳೆ ಚಾರ್ಜಿಂಗ್ ಸ್ಟೇಶನ್ ಸಿಕ್ಕಾಗ ಅಲ್ಲಿ ದೊಡ್ಡ ಕ್ಯೂ ಇರುತ್ತದಾ? ಇದ್ದರೆ ಏನು ಮಾಡುವುದು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನು ಶೀತ ಸಮಯದಲ್ಲಿ ಬ್ಯಾಟರಿಗಳು ಸರಿಯಾಗಿ ಚಾರ್ಜ್ ಆಗುವುದಿಲ್ಲ, ಇಂತಹ ಆತಂಕ, ಸವಾಲುಗಳು ಕೂಡ ಇರುತ್ತವೆ. ಮೂರನೇಯದಾಗಿ ನಮ್ಮ ವಾಹನದ ಬ್ಯಾಟರಿ ಚಾರ್ಜ್ ಮಾಡಲು ಎಷ್ಟು ಸಮಯ ಬೇಕಾಗುತ್ತದೆ ಎನ್ನುವ ಯೋಚನೆಯೂ ಸುಳಿಯುತ್ತಾ ಇರುತ್ತದೆ.
ಇದಕ್ಕೆಲ್ಲಾ ಇರುವ ಅತ್ಯುತ್ತಮ ಪರಿಹಾರ ಎಂದರೆ ನಮ್ಮ ದೇಶದಲ್ಲಿ ನಾವೇ ಬ್ಯಾಟರಿಗಳ ಉತ್ಪಾದನೆ ಮಾಡುವ ಕಾರ್ಯಕ್ಕೆ ಮುಂದಾಗುವುದು. ಇದು ನಾವು ಸ್ವತಂತ್ರವಾಗಿ ಮತ್ತು ಯಾರ ಮೇಲೆಯೂ ಅವಲಂಬನೆ ಆಗದೇ ಇರುವ ಏಕೈಕ ವಿಧಾನವೂ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳಂತೆ ಯಾರ ಮೇಲೆಯೂ ನಾವು ಅವಲಂಬಿತರಾಗಿರಬೇಕಾಗಿಲ್ಲ. ಇನ್ನು ಉತ್ತಮ ಡಿಸೈನಿನ ಬ್ಯಾಟರಿಯಿಂದ ನಾವು ಉತ್ಪಾದಿಸುವ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ದೂರ ಚಲಿಸಲು ಸಾಧ್ಯವಾಗುತ್ತದೆ. ಇಂತಹ ವಿಚಾರಗಳನ್ನು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಮಂಡಿಸಿದ್ದಾರೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ಕೇಂದ್ರ ಸರಕಾರ ಈ ವಿಷಯದಲ್ಲಿಯೂ ಯೋಜನೆ ಹಾಕಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search