• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search