• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search