• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search