• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search