• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಚಿತ್ರರಂಗದ ಏಳಿಗೆಗಾಗಿ ಪೂಜೆ ; ಹಿರಿಯ ನಟಿ ಭಾವೋದ್ವೇಗ

Tulunadu News Posted On August 14, 2024
0


0
Shares
  • Share On Facebook
  • Tweet It

ಇತ್ತೀಚಿನ ಕೆಲವು ವರ್ಷಗಳಲ್ಲಿ ಕನ್ನಡ ಚಿತ್ರರಂಗ ವಿವಿಧ ಸಮಸ್ಯೆಗಳನ್ನು ಅನುಭವಿಸಿಕೊಂಡು ಬರುತ್ತಿದೆ. ಥಿಯೇಟರ್ ಗಳಿಗೆ ಪ್ರೇಕ್ಷಕರು ಬರುವುದು ಕಡಿಮೆಯಾಗಿದೆ ಎನ್ನುವುದರಿಂದ ಹಿಡಿದು ಕಲಾವಿದರ, ತಂತ್ರಜ್ಞರ, ನಿರ್ಮಾಪಕರ ವೈಯಕ್ತಿಕ ಸಮಸ್ಯೆ, ಸಂಕಟಗಳು ಕೂಡ ಇಲ್ಲಿ ಪ್ರಮುಖವಾಗಿ ಚಿತ್ರರಂಗವನ್ನು ಕಾಡುತ್ತಿದ್ದವು. ಇದಕ್ಕೆ ಒಂದು ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಚಿತ್ರರಂಗದ ಪ್ರಮುಖರು ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಅವರನ್ನು ಭೇಟಿಯಾಗಿದ್ದಾರೆ. ಜ್ಯೋತಿಷಿ ಹೇಳಿದ ವಿಚಾರವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಸಿನಿಗಣ್ಯರು ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ, ನಾಗಾರಾಧನೆಯನ್ನು ಹಮ್ಮಿಕೊಂಡಿದ್ದರು. ಈ ಹೋಮ, ಹವನದಲ್ಲಿ ಹಿರಿಯ ಮತ್ತು ಕಿರಿಯ ನಟ, ನಟಿಯರು ಭಾಗಿಯಾಗಿದ್ದರು.

ಬುಧವಾರ ( ಅಗಸ್ಟ್ 14 ರಂದು) ಕಲಾವಿದರ ಸಂಘದಲ್ಲಿ ನಡೆದ ನಾಗಾರಾಧನೆ ವೇಳೆ ಕನ್ನಡ ಚಿತ್ರರಂಗದ ಹಿರಿಯ ನಟಿಯೊಬ್ಬರು ಭಾವೋದ್ವೇಗಕ್ಕೆ ಒಳಗಾದ ಘಟನೆ ನಡೆದಿದೆ.
ನಾಗಾರಾಧನೆಯ ಪೂಜಾ ವಿಧಿವಿಧಾನಗಳು ನಡೆಯುವಾಗಲೇ ಅಲ್ಲಿಯೇ ಇತರ ನಟಿಯೊಂದಿಗೆ ನಿಂತಿದ್ದ ಜ್ಯೋತಿಯವರು ಭಾವೋದ್ವೇಗಕ್ಕೆ ಒಳಗಾಗಿ ಕಂಪಿಸಿದ್ದಾರೆ. ಈ ವೇಳೆ ಜೊತೆಯಲ್ಲಿದ್ದ ಕಲಾವಿದರು ಅವರಿಗೆ ಕುಡಿಯಲು ನೀರು ಕೊಟ್ಟು ಸಮಾಧಾನಪಡಿಸಿದ್ದಾರೆ. ಈ ಘಟನೆ ಎಲ್ಲರಲ್ಲಿಯೂ ಭಕ್ತಿಪರವಶತೆಯನ್ನು ಉಂಟು ಮಾಡಿತ್ತು.

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಅವರ ನೇತೃತ್ವದಲ್ಲಿ ಈ ಹೋಮ – ಹವನಗಳು ನಡೆಯುತ್ತಿದ್ದು, ಅನೇಕ ಕಲಾವಿದರು ಭಾಗಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search