• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೌಮಿತ ಹತ್ಯಾ ಆರೋಪಿ ಕೊಲ್ಕೊತ್ತಾ ಪೊಲೀಸರ ನಾಗರಿಕ ಸ್ವಯಂಸೇವಕ!?

Tulunadu News Posted On August 15, 2024


  • Share On Facebook
  • Tweet It

ಪಶ್ಚಿಮ ಬಂಗಾಲದ ಕೊಲ್ಕೊತ್ತಾದ ಸರಕಾರಿ ಆಡಳಿತದ ಆರ್ ಜಿ ಖರ್ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ವೈದ್ಯೆ ಮೌಮಿತ ದೇಬನಾಥ್ ಅವರ ಮೃತದೇಹ ಸಿಕ್ಕಿದ ನಂತರ ಇಡೀ ಪಶ್ಚಿಮ ಬಂಗಾಲ ಮಾತ್ರವಲ್ಲ ದೇಶದ ವಿವಿಧ ಭಾಗಗಳಲ್ಲಿ ಆಕ್ರೋಶ ಕಂಡುಬಂದಿದೆ. ಅರೆ ನಗ್ನ ದೇಹ ಪತ್ತೆಯಾದಾಗಲೇ ಮೇಲ್ನೋಟಕ್ಕೆ ಅದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಎಂದು ಯಾರು ಬೇಕಾದರೂ ಹೇಳಬಹುದಾಗಿತ್ತು. ಯಾಕೆಂದರೆ ದೇಹ ಆ ರೀತಿಯಲ್ಲಿ ಕಂಡುಬಂದಿತ್ತು. ಆದರೆ ಆ ಹೆಣ್ಣುಮಗಳ ಮನೆಯವರಿಗೆ ಆಸ್ಪತ್ರೆಯ ಆಡಳಿತ ಮಂಡಳಿಯವರು ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿರುವುದಾಗಿ ಮೌಮಿತ ಕುಟುಂಬದವರು ಆರೋಪಿಸಿದ್ದಾರೆ. ಹಾಗಾದರೆ ಆಸ್ಪತ್ರೆಯವರು ಮೌಮಿತ ಅವರ ಪೋಷಕರಿಗೆ ಸುಳ್ಳು ಮಾಹಿತಿಯನ್ನು ಯಾಕೆ ಹೇಳಿದರು ಎನ್ನುವುದು ಈಗ ಇರುವ ಪ್ರಶ್ನೆ. ಹಾಗಾದರೆ ಇಲ್ಲಿ ಸುಳ್ಳು ಹೇಳಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗಿತ್ತಾ ಎನ್ನುವುದರ ಕುರಿತು ತನಿಖೆ ಆಗಬೇಕು.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೌಮಿತ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎನ್ನುವ ಅಂಶ ವರದಿ ಆಗಿದೆ. ಆ ಯುವತಿಯ ಗುಪ್ತಾಂಗದಲ್ಲಿ ಸಿಕ್ಕಿದ ವೀರ್ಯಾಣುಗಳು, ಅವಳ ಕಾಲ ಮೇಲೆ ಬಲ ಹಾಕಿ ಅದು ಮುರಿಯಲ್ಪಟ್ಟಿರುವುದು, ಕಣ್ಣುಗಳು ತೀವ್ರವಾಗಿ ಹಾನಿಗೊಳಗಾಗಿರುವುದು ಎಲ್ಲವನ್ನು ಪೋಸ್ಟ್ ಮಾರ್ಟಂ ನಲ್ಲಿ ವೈದ್ಯರು ಪತ್ತೆಹಚ್ಚಿದ್ದಾರೆ.

ಸದ್ಯ ಪೊಲೀಸರು ಬಂಧಿಸಿರುವ ಆರೋಪಿ ಸಂಜಯ್ ರಾಯ್ ಕೊಲ್ಕೋತ್ತಾ ಪೊಲೀಸರ ನಾಗರಿಕ ಸ್ವಯಂಸೇವಕನಾಗಿದ್ದಾನೆ. ಇವನ ಕ್ರಿಮಿನಲ್ ಹಿನ್ನಲೆಯ ಬಗ್ಗೆ ಪೊಲೀಸರಿಗೆ ಗೊತ್ತಿದ್ದೂ ಅವನಿಗೆ ತಮ್ಮ ಪರವಾಗಿ ಕೆಲಸ ಮಾಡಲು ಅನುಮತಿ ನೀಡಲಾಗಿತ್ತಾ ಎನ್ನುವುದರ ಬಗ್ಗೆ ತನಿಖೆ ಆಗಬೇಕು. ಇನ್ನು ಪೊಲೀಸರ ಕೃಪಾಕಟಾಕ್ಷ ಇದೆ ಎನ್ನುವ ಕಾರಣಕ್ಕೆ ಸಂಜಯ್ ರಾಯ್ ಹೀಗೆ ಮಾಡಿದ್ನಾ ಎಂದು ಕೂಡ ಗೊತ್ತಾಗಬೇಕು.
ಇನ್ನು ಆಶ್ಚರ್ಯ ಎಂದರೆ ಮೌಮಿತ ಅವರ ಮೃತದೇಹ ಸಿಕ್ಕಿದ ಕೆಲವೇ ಗಜಗಳ ಅಂತರದಲ್ಲಿ ಆಸ್ಪತ್ರೆಯವರು ಕಟ್ಟಡದ ನಿರ್ಮಾಣ ಕಾರ್ಯ ಆರಂಭಿಸಿದ್ದಾರೆ. ಇದು ಸಾಕ್ಷ್ಯಗಳನ್ನು ದಮನಿಸುವ ಯತ್ನವಾ ಎಂದು ಕೂಡ ನೋಡಬೇಕು.

ಕೊನೆಯದಾಗಿ ಶೀಘ್ರದಲ್ಲಿ ತನಿಖೆ ನಡೆದು ಎಲ್ಲಾ ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆಯಾಗಲಿ ಎನ್ನುವುದು ಎಲ್ಲರ ಪ್ರಾರ್ಥನೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search