• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೌಮಿತ ಹತ್ಯಾ ಆರೋಪಿ ಕೊಲ್ಕೊತ್ತಾ ಪೊಲೀಸರ ನಾಗರಿಕ ಸ್ವಯಂಸೇವಕ!?

Tulunadu News Posted On August 15, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ಕೊಲ್ಕೊತ್ತಾದ ಸರಕಾರಿ ಆಡಳಿತದ ಆರ್ ಜಿ ಖರ್ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ವೈದ್ಯೆ ಮೌಮಿತ ದೇಬನಾಥ್ ಅವರ ಮೃತದೇಹ ಸಿಕ್ಕಿದ ನಂತರ ಇಡೀ ಪಶ್ಚಿಮ ಬಂಗಾಲ ಮಾತ್ರವಲ್ಲ ದೇಶದ ವಿವಿಧ ಭಾಗಗಳಲ್ಲಿ ಆಕ್ರೋಶ ಕಂಡುಬಂದಿದೆ. ಅರೆ ನಗ್ನ ದೇಹ ಪತ್ತೆಯಾದಾಗಲೇ ಮೇಲ್ನೋಟಕ್ಕೆ ಅದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಎಂದು ಯಾರು ಬೇಕಾದರೂ ಹೇಳಬಹುದಾಗಿತ್ತು. ಯಾಕೆಂದರೆ ದೇಹ ಆ ರೀತಿಯಲ್ಲಿ ಕಂಡುಬಂದಿತ್ತು. ಆದರೆ ಆ ಹೆಣ್ಣುಮಗಳ ಮನೆಯವರಿಗೆ ಆಸ್ಪತ್ರೆಯ ಆಡಳಿತ ಮಂಡಳಿಯವರು ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿರುವುದಾಗಿ ಮೌಮಿತ ಕುಟುಂಬದವರು ಆರೋಪಿಸಿದ್ದಾರೆ. ಹಾಗಾದರೆ ಆಸ್ಪತ್ರೆಯವರು ಮೌಮಿತ ಅವರ ಪೋಷಕರಿಗೆ ಸುಳ್ಳು ಮಾಹಿತಿಯನ್ನು ಯಾಕೆ ಹೇಳಿದರು ಎನ್ನುವುದು ಈಗ ಇರುವ ಪ್ರಶ್ನೆ. ಹಾಗಾದರೆ ಇಲ್ಲಿ ಸುಳ್ಳು ಹೇಳಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗಿತ್ತಾ ಎನ್ನುವುದರ ಕುರಿತು ತನಿಖೆ ಆಗಬೇಕು.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೌಮಿತ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎನ್ನುವ ಅಂಶ ವರದಿ ಆಗಿದೆ. ಆ ಯುವತಿಯ ಗುಪ್ತಾಂಗದಲ್ಲಿ ಸಿಕ್ಕಿದ ವೀರ್ಯಾಣುಗಳು, ಅವಳ ಕಾಲ ಮೇಲೆ ಬಲ ಹಾಕಿ ಅದು ಮುರಿಯಲ್ಪಟ್ಟಿರುವುದು, ಕಣ್ಣುಗಳು ತೀವ್ರವಾಗಿ ಹಾನಿಗೊಳಗಾಗಿರುವುದು ಎಲ್ಲವನ್ನು ಪೋಸ್ಟ್ ಮಾರ್ಟಂ ನಲ್ಲಿ ವೈದ್ಯರು ಪತ್ತೆಹಚ್ಚಿದ್ದಾರೆ.

ಸದ್ಯ ಪೊಲೀಸರು ಬಂಧಿಸಿರುವ ಆರೋಪಿ ಸಂಜಯ್ ರಾಯ್ ಕೊಲ್ಕೋತ್ತಾ ಪೊಲೀಸರ ನಾಗರಿಕ ಸ್ವಯಂಸೇವಕನಾಗಿದ್ದಾನೆ. ಇವನ ಕ್ರಿಮಿನಲ್ ಹಿನ್ನಲೆಯ ಬಗ್ಗೆ ಪೊಲೀಸರಿಗೆ ಗೊತ್ತಿದ್ದೂ ಅವನಿಗೆ ತಮ್ಮ ಪರವಾಗಿ ಕೆಲಸ ಮಾಡಲು ಅನುಮತಿ ನೀಡಲಾಗಿತ್ತಾ ಎನ್ನುವುದರ ಬಗ್ಗೆ ತನಿಖೆ ಆಗಬೇಕು. ಇನ್ನು ಪೊಲೀಸರ ಕೃಪಾಕಟಾಕ್ಷ ಇದೆ ಎನ್ನುವ ಕಾರಣಕ್ಕೆ ಸಂಜಯ್ ರಾಯ್ ಹೀಗೆ ಮಾಡಿದ್ನಾ ಎಂದು ಕೂಡ ಗೊತ್ತಾಗಬೇಕು.
ಇನ್ನು ಆಶ್ಚರ್ಯ ಎಂದರೆ ಮೌಮಿತ ಅವರ ಮೃತದೇಹ ಸಿಕ್ಕಿದ ಕೆಲವೇ ಗಜಗಳ ಅಂತರದಲ್ಲಿ ಆಸ್ಪತ್ರೆಯವರು ಕಟ್ಟಡದ ನಿರ್ಮಾಣ ಕಾರ್ಯ ಆರಂಭಿಸಿದ್ದಾರೆ. ಇದು ಸಾಕ್ಷ್ಯಗಳನ್ನು ದಮನಿಸುವ ಯತ್ನವಾ ಎಂದು ಕೂಡ ನೋಡಬೇಕು.

ಕೊನೆಯದಾಗಿ ಶೀಘ್ರದಲ್ಲಿ ತನಿಖೆ ನಡೆದು ಎಲ್ಲಾ ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆಯಾಗಲಿ ಎನ್ನುವುದು ಎಲ್ಲರ ಪ್ರಾರ್ಥನೆ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search