• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೌಮಿತ ಹತ್ಯಾ ಆರೋಪಿ ಕೊಲ್ಕೊತ್ತಾ ಪೊಲೀಸರ ನಾಗರಿಕ ಸ್ವಯಂಸೇವಕ!?

Tulunadu News Posted On August 15, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ಕೊಲ್ಕೊತ್ತಾದ ಸರಕಾರಿ ಆಡಳಿತದ ಆರ್ ಜಿ ಖರ್ ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ವೈದ್ಯೆ ಮೌಮಿತ ದೇಬನಾಥ್ ಅವರ ಮೃತದೇಹ ಸಿಕ್ಕಿದ ನಂತರ ಇಡೀ ಪಶ್ಚಿಮ ಬಂಗಾಲ ಮಾತ್ರವಲ್ಲ ದೇಶದ ವಿವಿಧ ಭಾಗಗಳಲ್ಲಿ ಆಕ್ರೋಶ ಕಂಡುಬಂದಿದೆ. ಅರೆ ನಗ್ನ ದೇಹ ಪತ್ತೆಯಾದಾಗಲೇ ಮೇಲ್ನೋಟಕ್ಕೆ ಅದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಎಂದು ಯಾರು ಬೇಕಾದರೂ ಹೇಳಬಹುದಾಗಿತ್ತು. ಯಾಕೆಂದರೆ ದೇಹ ಆ ರೀತಿಯಲ್ಲಿ ಕಂಡುಬಂದಿತ್ತು. ಆದರೆ ಆ ಹೆಣ್ಣುಮಗಳ ಮನೆಯವರಿಗೆ ಆಸ್ಪತ್ರೆಯ ಆಡಳಿತ ಮಂಡಳಿಯವರು ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿರುವುದಾಗಿ ಮೌಮಿತ ಕುಟುಂಬದವರು ಆರೋಪಿಸಿದ್ದಾರೆ. ಹಾಗಾದರೆ ಆಸ್ಪತ್ರೆಯವರು ಮೌಮಿತ ಅವರ ಪೋಷಕರಿಗೆ ಸುಳ್ಳು ಮಾಹಿತಿಯನ್ನು ಯಾಕೆ ಹೇಳಿದರು ಎನ್ನುವುದು ಈಗ ಇರುವ ಪ್ರಶ್ನೆ. ಹಾಗಾದರೆ ಇಲ್ಲಿ ಸುಳ್ಳು ಹೇಳಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗಿತ್ತಾ ಎನ್ನುವುದರ ಕುರಿತು ತನಿಖೆ ಆಗಬೇಕು.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೌಮಿತ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎನ್ನುವ ಅಂಶ ವರದಿ ಆಗಿದೆ. ಆ ಯುವತಿಯ ಗುಪ್ತಾಂಗದಲ್ಲಿ ಸಿಕ್ಕಿದ ವೀರ್ಯಾಣುಗಳು, ಅವಳ ಕಾಲ ಮೇಲೆ ಬಲ ಹಾಕಿ ಅದು ಮುರಿಯಲ್ಪಟ್ಟಿರುವುದು, ಕಣ್ಣುಗಳು ತೀವ್ರವಾಗಿ ಹಾನಿಗೊಳಗಾಗಿರುವುದು ಎಲ್ಲವನ್ನು ಪೋಸ್ಟ್ ಮಾರ್ಟಂ ನಲ್ಲಿ ವೈದ್ಯರು ಪತ್ತೆಹಚ್ಚಿದ್ದಾರೆ.

ಸದ್ಯ ಪೊಲೀಸರು ಬಂಧಿಸಿರುವ ಆರೋಪಿ ಸಂಜಯ್ ರಾಯ್ ಕೊಲ್ಕೋತ್ತಾ ಪೊಲೀಸರ ನಾಗರಿಕ ಸ್ವಯಂಸೇವಕನಾಗಿದ್ದಾನೆ. ಇವನ ಕ್ರಿಮಿನಲ್ ಹಿನ್ನಲೆಯ ಬಗ್ಗೆ ಪೊಲೀಸರಿಗೆ ಗೊತ್ತಿದ್ದೂ ಅವನಿಗೆ ತಮ್ಮ ಪರವಾಗಿ ಕೆಲಸ ಮಾಡಲು ಅನುಮತಿ ನೀಡಲಾಗಿತ್ತಾ ಎನ್ನುವುದರ ಬಗ್ಗೆ ತನಿಖೆ ಆಗಬೇಕು. ಇನ್ನು ಪೊಲೀಸರ ಕೃಪಾಕಟಾಕ್ಷ ಇದೆ ಎನ್ನುವ ಕಾರಣಕ್ಕೆ ಸಂಜಯ್ ರಾಯ್ ಹೀಗೆ ಮಾಡಿದ್ನಾ ಎಂದು ಕೂಡ ಗೊತ್ತಾಗಬೇಕು.
ಇನ್ನು ಆಶ್ಚರ್ಯ ಎಂದರೆ ಮೌಮಿತ ಅವರ ಮೃತದೇಹ ಸಿಕ್ಕಿದ ಕೆಲವೇ ಗಜಗಳ ಅಂತರದಲ್ಲಿ ಆಸ್ಪತ್ರೆಯವರು ಕಟ್ಟಡದ ನಿರ್ಮಾಣ ಕಾರ್ಯ ಆರಂಭಿಸಿದ್ದಾರೆ. ಇದು ಸಾಕ್ಷ್ಯಗಳನ್ನು ದಮನಿಸುವ ಯತ್ನವಾ ಎಂದು ಕೂಡ ನೋಡಬೇಕು.

ಕೊನೆಯದಾಗಿ ಶೀಘ್ರದಲ್ಲಿ ತನಿಖೆ ನಡೆದು ಎಲ್ಲಾ ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆಯಾಗಲಿ ಎನ್ನುವುದು ಎಲ್ಲರ ಪ್ರಾರ್ಥನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search