• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಲ್ಲಿಲ್ಲ ಸ್ಥಾನ: ಇಂಗ್ಲೆಂಡಿನಲ್ಲಿ 5 ವಿಕೆಟ್ ಕಬಳಿಸಿ ರೈಸಿಂಗ್ ಚಹಲ್!

Tulunadu News Posted On August 15, 2024
0


0
Shares
  • Share On Facebook
  • Tweet It

ಟೀಮ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರಿಗೆ ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿತ್ತು. ಮತ್ತೊಂದೆಡೆ ದುಲೀಪ್ ಟ್ರೋಪಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲಿಯೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಇದರಿಂದ ಯುಜ್ವೇಂದ್ರ ಚಹಲ್ ಇಂಗ್ಲೆಂಡಿಗೆ ಸವಾರಿ ಬೆಳೆಸಿದ್ದಾರೆ.

ಅಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟಿನಲ್ಲಿ ನಾರ್ಥಾಂಪ್ಟನ್ ಶೈರ್ ಪರ ಅವರು ಆಡುತ್ತಿದ್ದಾರೆ. ಇದು ಅವರ ಕ್ರಿಕೆಟ್ ಜೀವನದ ಮೊದಲ ಕೌಂಟಿ ಪಂದ್ಯವೂ ಆಗಿದೆ. ಅಲ್ಲಿ ಚೊಚ್ಚಲ ಪಂದ್ಯದಲ್ಲಿ 14 ರನ್ನಿಗೆ 5 ವಿಕೆಟ್ ಕಿತ್ತು ಮಿಂಚಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆದಾರರಿಗೆ ತಮ್ಮಲ್ಲಿನ ಸಾಮರ್ತ್ಯದ ಸಂದೇಶ ರವಾನಿಸಿದ್ದಾರೆ.

ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್ ಗ್ರೌಂಡ್ ನಲ್ಲಿ ನಡೆದ ಪಂದ್ಯದಲ್ಲಿ ಕೆಂಟ್ ಹಾಗೂ ನಾರ್ಥಾಂಪ್ಟನ್ ಶೈರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಇಲ್ಲಿ ಬೌಲಿಂಗ್ ಮಾಡಲು ಚಹಲ್ ಮುಂದಾಗುತ್ತಿದ್ದಂತೆ ಕೆಂಟ್ ತಂಡ ತತ್ತರಿಸಿ ಹೋಗಿದೆ. ಚಹಲ್ ಎಸೆದ ಹತ್ತು ಓವರ್ ಗಳಲ್ಲಿ 5 ಮೇಡನ್ ಓವರಗಳಾಗಿದ್ದು ಮಾತ್ರವಲ್ಲ, ಉಳಿದ ಐದು ಓವರ್ ಗಳಲ್ಲಿ ಐದು ವಿಕೆಟು ಕಬಳಿಸಲು ಅವರು ಬಿಟ್ಟುಕೊಟ್ಟಿದ್ದು 14 ರನ್ ಮಾತ್ರ. ಒಟ್ಟಾರೆ ಚಹಲ್ ಕೈಚಳಕದಿಂದ ಕೆಂಟ್ ತಂಡವನ್ನು 35.1 ಓವರ್ ಗಳಲ್ಲಿ 82 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಚಹಲ್ ತಂಡ ಯಶಸ್ವಿಯಾಗಿದೆ.

ಈ ಪ್ರದರ್ಶನದಿಂದ ಚಹಲ್ ಉತ್ತೇಜಿತರಾಗಿದ್ದು, ಕೌಂಟಿಯಲ್ಲಿ ಇನ್ನಷ್ಟು ಸಾಧನೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದರಿಂದ ಅವರಿಗೆ ಮತ್ತೆ ಟೀಮ್ ಭಾರತ್ ಕ್ರಿಕೆಟ್ ತಂಡದ ಬಾಗಿಲು ತೆರೆಯುವ ಸಾಧ್ಯತೆ ನಿಚ್ಚಳವಾದಂತೆ ಆಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search