• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಲ್ಲಿಲ್ಲ ಸ್ಥಾನ: ಇಂಗ್ಲೆಂಡಿನಲ್ಲಿ 5 ವಿಕೆಟ್ ಕಬಳಿಸಿ ರೈಸಿಂಗ್ ಚಹಲ್!

Tulunadu News Posted On August 15, 2024
0


0
Shares
  • Share On Facebook
  • Tweet It

ಟೀಮ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರಿಗೆ ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿತ್ತು. ಮತ್ತೊಂದೆಡೆ ದುಲೀಪ್ ಟ್ರೋಪಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲಿಯೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಇದರಿಂದ ಯುಜ್ವೇಂದ್ರ ಚಹಲ್ ಇಂಗ್ಲೆಂಡಿಗೆ ಸವಾರಿ ಬೆಳೆಸಿದ್ದಾರೆ.

ಅಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟಿನಲ್ಲಿ ನಾರ್ಥಾಂಪ್ಟನ್ ಶೈರ್ ಪರ ಅವರು ಆಡುತ್ತಿದ್ದಾರೆ. ಇದು ಅವರ ಕ್ರಿಕೆಟ್ ಜೀವನದ ಮೊದಲ ಕೌಂಟಿ ಪಂದ್ಯವೂ ಆಗಿದೆ. ಅಲ್ಲಿ ಚೊಚ್ಚಲ ಪಂದ್ಯದಲ್ಲಿ 14 ರನ್ನಿಗೆ 5 ವಿಕೆಟ್ ಕಿತ್ತು ಮಿಂಚಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆದಾರರಿಗೆ ತಮ್ಮಲ್ಲಿನ ಸಾಮರ್ತ್ಯದ ಸಂದೇಶ ರವಾನಿಸಿದ್ದಾರೆ.

ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್ ಗ್ರೌಂಡ್ ನಲ್ಲಿ ನಡೆದ ಪಂದ್ಯದಲ್ಲಿ ಕೆಂಟ್ ಹಾಗೂ ನಾರ್ಥಾಂಪ್ಟನ್ ಶೈರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಇಲ್ಲಿ ಬೌಲಿಂಗ್ ಮಾಡಲು ಚಹಲ್ ಮುಂದಾಗುತ್ತಿದ್ದಂತೆ ಕೆಂಟ್ ತಂಡ ತತ್ತರಿಸಿ ಹೋಗಿದೆ. ಚಹಲ್ ಎಸೆದ ಹತ್ತು ಓವರ್ ಗಳಲ್ಲಿ 5 ಮೇಡನ್ ಓವರಗಳಾಗಿದ್ದು ಮಾತ್ರವಲ್ಲ, ಉಳಿದ ಐದು ಓವರ್ ಗಳಲ್ಲಿ ಐದು ವಿಕೆಟು ಕಬಳಿಸಲು ಅವರು ಬಿಟ್ಟುಕೊಟ್ಟಿದ್ದು 14 ರನ್ ಮಾತ್ರ. ಒಟ್ಟಾರೆ ಚಹಲ್ ಕೈಚಳಕದಿಂದ ಕೆಂಟ್ ತಂಡವನ್ನು 35.1 ಓವರ್ ಗಳಲ್ಲಿ 82 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಚಹಲ್ ತಂಡ ಯಶಸ್ವಿಯಾಗಿದೆ.

ಈ ಪ್ರದರ್ಶನದಿಂದ ಚಹಲ್ ಉತ್ತೇಜಿತರಾಗಿದ್ದು, ಕೌಂಟಿಯಲ್ಲಿ ಇನ್ನಷ್ಟು ಸಾಧನೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದರಿಂದ ಅವರಿಗೆ ಮತ್ತೆ ಟೀಮ್ ಭಾರತ್ ಕ್ರಿಕೆಟ್ ತಂಡದ ಬಾಗಿಲು ತೆರೆಯುವ ಸಾಧ್ಯತೆ ನಿಚ್ಚಳವಾದಂತೆ ಆಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search