• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಡಿಶಾ ಸರಕಾರ ನಿರ್ಧಾರದಿಂದಾಗಿ ಉದ್ಯೋಗಸ್ಥ ಮಹಿಳೆಯರು ಫುಲ್ ಖುಶ್!

Tulunadu News Posted On August 15, 2024
0


0
Shares
  • Share On Facebook
  • Tweet It

ಒಡಿಶಾದ ನೂತನ ಸರಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರಿಂದ ಅಲ್ಲಿನ ಲಕ್ಷಾಂತರ ಉದ್ಯೋಗಸ್ಥ ಮಹಿಳೆಯರ ಮೊಗದಲ್ಲಿ ನೆಮ್ಮದಿಯ ವಾತಾವರಣವನ್ನು ಮೂಡಿಸಿದೆ. ಅಷ್ಟಕ್ಕೂ ಈ ವಿಷಯ ರಾಷ್ಟ್ರ ರಾಜಕೀಯದಲ್ಲಿ ಬಹಳ ಸಮಯದಿಂದಲೂ ಚರ್ಚೆಯಲ್ಲಿತ್ತು. ಆಗಿನ ಕೇಂದ್ರ ಸಚಿವರಾಗಿದ್ದ ಸ್ಮೃತಿ ಇರಾನಿಯವರು ಈ ಬಗ್ಗೆ ಕೊಟ್ಟ ಒಂದು ಹೇಳಿಕೆಯಿಂದ ಮಹಿಳೆಯರ ಕೆಂಗೆಣ್ಣಿಗೂ ಗುರಿಯಾಗಿದ್ದರು. ಒಟ್ಟಿನಲ್ಲಿ ಮಹಿಳೆಯರಿಗೆ ಮುಟ್ಟಿನ ದಿನಗಳಲ್ಲಿ ಒಂದು ದಿನ ರಜೆ ನೀಡಬೇಕೆ, ಬೇಡವೇ ಎನ್ನುವುದರ ಕುರಿತು ಚರ್ಚೆ ಹಲವು ಕಾಲದಿಂದ ಇದೆ. ಈಗ ಒಡಿಶಾ ಸರಕಾರ ಈ ಬಗ್ಗೆ ಖಡಕ್ ನಿರ್ಧಾರವನ್ನು ತೆಗೆದು ರಾಜ್ಯದ ಸರಕಾರಿ ಹಾಗೂ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯನ್ನು ಘೋಷಿಸಿದೆ.

ಒಡಿಶಾದ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಇದನ್ನು ಘೋಷಿಸಿದ್ದು, ಮಹಿಳಾ ಉದ್ಯೋಗಿಗಳು ಮುಟ್ಟಾದ ಮೊದಲ ಅಥವಾ ಎರಡನೇ ದಿನ ವೇತನ ಸಹಿತ ರಜೆ ಪಡೆಯಬಹುದು. ಅದಾಗ್ಯೂ ರಜೆ ತೆಗೆದುಕೊಳ್ಳುವುದು ಅವರವರ ಇಚ್ಚೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಅಚಾನಕ್ ಆಗಿ ಒಡಿಶಾ ಸರಕಾರ ಇಂತಹ ತೀರ್ಮಾನ ತೆಗೆದುಕೊಳ್ಳಲು ಕಾರಣಗಳೂ ಇವೆ. ಕೀನ್ಯಾದ ನೈರೋಬಿಯಲ್ಲಿ ನಡೆದ ” ಯುನೈಟೆಡ್ ನೇಷನ್ಸ್ ಸಿವಿಲ್ ಸೊಸೈಟಿ ಕಾನ್ಫರೆನ್ಸ್ – 2024 ” ರಲ್ಲಿ ಭಾಗವಹಿಸಿದ್ದ ಒಡಿಶಾದ ಹುಡುಗಿಯೊಬ್ಬಳು ಋತುಸ್ರಾವ ದಿನಗಳಲ್ಲಿ ವೇತನ ಸಹಿತ ರಜೆ ನೀಡಬೇಕು ಎಂದು ವಾದ ಮಂಡಿಸಿದ್ದಳು. ಒಡಿಶಾದ ಕಾರ್ಯಕರ್ತೆ ರಂಜಿತಾ ಪ್ರಿಯದರ್ಶಿನಿ ಅವರು ವೇತನ ಸಹಿತ ಮುಟ್ಟಿನ ರಜೆ ಬಗ್ಗೆ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಲ್ಲಾ ಪ್ರತಿನಿಧಿಗಳ ಗಮನ ಸೆಳೆದಿದ್ದಳು. ಮುಟ್ಟಿನ ದಿನಗಳಲ್ಲಿ ಮಹಿಳೆಯರು ನೋವಿನಿಂದ ಸಂಕಷ್ಟ ಅನುಭವಿಸುತ್ತಾರೆ ಎಂದು ಧ್ವನಿ ಎತ್ತಿದ್ದಳು.

ಕೊನೆಗೂ ಒಡಿಶಾ ಸರಕಾರ ಈ ನಿಟ್ಟಿನಲ್ಲಿ ದೃಢ ಹೆಜ್ಜೆ ಇಟ್ಟಿದ್ದು, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಸ್ತುವಾರಿಯೂ ಆಗಿರುವ ಪರಿದಾ ಅವರು ಕಟಕ್ ನಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಈ ಘೋಷಣೆ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search