• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಡಿಶಾ ಸರಕಾರ ನಿರ್ಧಾರದಿಂದಾಗಿ ಉದ್ಯೋಗಸ್ಥ ಮಹಿಳೆಯರು ಫುಲ್ ಖುಶ್!

Tulunadu News Posted On August 15, 2024
0


0
Shares
  • Share On Facebook
  • Tweet It

ಒಡಿಶಾದ ನೂತನ ಸರಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರಿಂದ ಅಲ್ಲಿನ ಲಕ್ಷಾಂತರ ಉದ್ಯೋಗಸ್ಥ ಮಹಿಳೆಯರ ಮೊಗದಲ್ಲಿ ನೆಮ್ಮದಿಯ ವಾತಾವರಣವನ್ನು ಮೂಡಿಸಿದೆ. ಅಷ್ಟಕ್ಕೂ ಈ ವಿಷಯ ರಾಷ್ಟ್ರ ರಾಜಕೀಯದಲ್ಲಿ ಬಹಳ ಸಮಯದಿಂದಲೂ ಚರ್ಚೆಯಲ್ಲಿತ್ತು. ಆಗಿನ ಕೇಂದ್ರ ಸಚಿವರಾಗಿದ್ದ ಸ್ಮೃತಿ ಇರಾನಿಯವರು ಈ ಬಗ್ಗೆ ಕೊಟ್ಟ ಒಂದು ಹೇಳಿಕೆಯಿಂದ ಮಹಿಳೆಯರ ಕೆಂಗೆಣ್ಣಿಗೂ ಗುರಿಯಾಗಿದ್ದರು. ಒಟ್ಟಿನಲ್ಲಿ ಮಹಿಳೆಯರಿಗೆ ಮುಟ್ಟಿನ ದಿನಗಳಲ್ಲಿ ಒಂದು ದಿನ ರಜೆ ನೀಡಬೇಕೆ, ಬೇಡವೇ ಎನ್ನುವುದರ ಕುರಿತು ಚರ್ಚೆ ಹಲವು ಕಾಲದಿಂದ ಇದೆ. ಈಗ ಒಡಿಶಾ ಸರಕಾರ ಈ ಬಗ್ಗೆ ಖಡಕ್ ನಿರ್ಧಾರವನ್ನು ತೆಗೆದು ರಾಜ್ಯದ ಸರಕಾರಿ ಹಾಗೂ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯನ್ನು ಘೋಷಿಸಿದೆ.

ಒಡಿಶಾದ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಇದನ್ನು ಘೋಷಿಸಿದ್ದು, ಮಹಿಳಾ ಉದ್ಯೋಗಿಗಳು ಮುಟ್ಟಾದ ಮೊದಲ ಅಥವಾ ಎರಡನೇ ದಿನ ವೇತನ ಸಹಿತ ರಜೆ ಪಡೆಯಬಹುದು. ಅದಾಗ್ಯೂ ರಜೆ ತೆಗೆದುಕೊಳ್ಳುವುದು ಅವರವರ ಇಚ್ಚೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಅಚಾನಕ್ ಆಗಿ ಒಡಿಶಾ ಸರಕಾರ ಇಂತಹ ತೀರ್ಮಾನ ತೆಗೆದುಕೊಳ್ಳಲು ಕಾರಣಗಳೂ ಇವೆ. ಕೀನ್ಯಾದ ನೈರೋಬಿಯಲ್ಲಿ ನಡೆದ ” ಯುನೈಟೆಡ್ ನೇಷನ್ಸ್ ಸಿವಿಲ್ ಸೊಸೈಟಿ ಕಾನ್ಫರೆನ್ಸ್ – 2024 ” ರಲ್ಲಿ ಭಾಗವಹಿಸಿದ್ದ ಒಡಿಶಾದ ಹುಡುಗಿಯೊಬ್ಬಳು ಋತುಸ್ರಾವ ದಿನಗಳಲ್ಲಿ ವೇತನ ಸಹಿತ ರಜೆ ನೀಡಬೇಕು ಎಂದು ವಾದ ಮಂಡಿಸಿದ್ದಳು. ಒಡಿಶಾದ ಕಾರ್ಯಕರ್ತೆ ರಂಜಿತಾ ಪ್ರಿಯದರ್ಶಿನಿ ಅವರು ವೇತನ ಸಹಿತ ಮುಟ್ಟಿನ ರಜೆ ಬಗ್ಗೆ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಲ್ಲಾ ಪ್ರತಿನಿಧಿಗಳ ಗಮನ ಸೆಳೆದಿದ್ದಳು. ಮುಟ್ಟಿನ ದಿನಗಳಲ್ಲಿ ಮಹಿಳೆಯರು ನೋವಿನಿಂದ ಸಂಕಷ್ಟ ಅನುಭವಿಸುತ್ತಾರೆ ಎಂದು ಧ್ವನಿ ಎತ್ತಿದ್ದಳು.

ಕೊನೆಗೂ ಒಡಿಶಾ ಸರಕಾರ ಈ ನಿಟ್ಟಿನಲ್ಲಿ ದೃಢ ಹೆಜ್ಜೆ ಇಟ್ಟಿದ್ದು, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಸ್ತುವಾರಿಯೂ ಆಗಿರುವ ಪರಿದಾ ಅವರು ಕಟಕ್ ನಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಈ ಘೋಷಣೆ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search