• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಡಿಶಾ ಸರಕಾರ ನಿರ್ಧಾರದಿಂದಾಗಿ ಉದ್ಯೋಗಸ್ಥ ಮಹಿಳೆಯರು ಫುಲ್ ಖುಶ್!

Tulunadu News Posted On August 15, 2024
0


0
Shares
  • Share On Facebook
  • Tweet It

ಒಡಿಶಾದ ನೂತನ ಸರಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರಿಂದ ಅಲ್ಲಿನ ಲಕ್ಷಾಂತರ ಉದ್ಯೋಗಸ್ಥ ಮಹಿಳೆಯರ ಮೊಗದಲ್ಲಿ ನೆಮ್ಮದಿಯ ವಾತಾವರಣವನ್ನು ಮೂಡಿಸಿದೆ. ಅಷ್ಟಕ್ಕೂ ಈ ವಿಷಯ ರಾಷ್ಟ್ರ ರಾಜಕೀಯದಲ್ಲಿ ಬಹಳ ಸಮಯದಿಂದಲೂ ಚರ್ಚೆಯಲ್ಲಿತ್ತು. ಆಗಿನ ಕೇಂದ್ರ ಸಚಿವರಾಗಿದ್ದ ಸ್ಮೃತಿ ಇರಾನಿಯವರು ಈ ಬಗ್ಗೆ ಕೊಟ್ಟ ಒಂದು ಹೇಳಿಕೆಯಿಂದ ಮಹಿಳೆಯರ ಕೆಂಗೆಣ್ಣಿಗೂ ಗುರಿಯಾಗಿದ್ದರು. ಒಟ್ಟಿನಲ್ಲಿ ಮಹಿಳೆಯರಿಗೆ ಮುಟ್ಟಿನ ದಿನಗಳಲ್ಲಿ ಒಂದು ದಿನ ರಜೆ ನೀಡಬೇಕೆ, ಬೇಡವೇ ಎನ್ನುವುದರ ಕುರಿತು ಚರ್ಚೆ ಹಲವು ಕಾಲದಿಂದ ಇದೆ. ಈಗ ಒಡಿಶಾ ಸರಕಾರ ಈ ಬಗ್ಗೆ ಖಡಕ್ ನಿರ್ಧಾರವನ್ನು ತೆಗೆದು ರಾಜ್ಯದ ಸರಕಾರಿ ಹಾಗೂ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯನ್ನು ಘೋಷಿಸಿದೆ.

ಒಡಿಶಾದ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಇದನ್ನು ಘೋಷಿಸಿದ್ದು, ಮಹಿಳಾ ಉದ್ಯೋಗಿಗಳು ಮುಟ್ಟಾದ ಮೊದಲ ಅಥವಾ ಎರಡನೇ ದಿನ ವೇತನ ಸಹಿತ ರಜೆ ಪಡೆಯಬಹುದು. ಅದಾಗ್ಯೂ ರಜೆ ತೆಗೆದುಕೊಳ್ಳುವುದು ಅವರವರ ಇಚ್ಚೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಅಚಾನಕ್ ಆಗಿ ಒಡಿಶಾ ಸರಕಾರ ಇಂತಹ ತೀರ್ಮಾನ ತೆಗೆದುಕೊಳ್ಳಲು ಕಾರಣಗಳೂ ಇವೆ. ಕೀನ್ಯಾದ ನೈರೋಬಿಯಲ್ಲಿ ನಡೆದ ” ಯುನೈಟೆಡ್ ನೇಷನ್ಸ್ ಸಿವಿಲ್ ಸೊಸೈಟಿ ಕಾನ್ಫರೆನ್ಸ್ – 2024 ” ರಲ್ಲಿ ಭಾಗವಹಿಸಿದ್ದ ಒಡಿಶಾದ ಹುಡುಗಿಯೊಬ್ಬಳು ಋತುಸ್ರಾವ ದಿನಗಳಲ್ಲಿ ವೇತನ ಸಹಿತ ರಜೆ ನೀಡಬೇಕು ಎಂದು ವಾದ ಮಂಡಿಸಿದ್ದಳು. ಒಡಿಶಾದ ಕಾರ್ಯಕರ್ತೆ ರಂಜಿತಾ ಪ್ರಿಯದರ್ಶಿನಿ ಅವರು ವೇತನ ಸಹಿತ ಮುಟ್ಟಿನ ರಜೆ ಬಗ್ಗೆ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಲ್ಲಾ ಪ್ರತಿನಿಧಿಗಳ ಗಮನ ಸೆಳೆದಿದ್ದಳು. ಮುಟ್ಟಿನ ದಿನಗಳಲ್ಲಿ ಮಹಿಳೆಯರು ನೋವಿನಿಂದ ಸಂಕಷ್ಟ ಅನುಭವಿಸುತ್ತಾರೆ ಎಂದು ಧ್ವನಿ ಎತ್ತಿದ್ದಳು.

ಕೊನೆಗೂ ಒಡಿಶಾ ಸರಕಾರ ಈ ನಿಟ್ಟಿನಲ್ಲಿ ದೃಢ ಹೆಜ್ಜೆ ಇಟ್ಟಿದ್ದು, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಸ್ತುವಾರಿಯೂ ಆಗಿರುವ ಪರಿದಾ ಅವರು ಕಟಕ್ ನಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಈ ಘೋಷಣೆ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search