• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಮ್ ಭಾರತದ ಬೌಲಿಂಗ್ ಕೋಚ್ ಭಾರತೀಯ ಅಲ್ಲ!

Tulunadu News Posted On August 15, 2024
0


0
Shares
  • Share On Facebook
  • Tweet It

ಟೀಮ್ ಭಾರತಕ್ಕೆ ಪ್ರಧಾನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾದ ನಂತರ ಬೌಲಿಂಗ್ ಕೋಚ್ ಆಗಿ ಯಾರು ನೇಮಕ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಯಾಕೆಂದರೆ ಗಂಭೀರ್ ಎಷ್ಟೇಂದರೂ ಬ್ಯಾಟಿಂಗ್ ಸ್ಪೆಶಲಿಸ್ಟ್. ಆರಂಭಿಕ ದಾಂಡಿಗನಾಗಿ ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಹಾಗಿರುವಾಗ ಅವರು ಪ್ರಧಾನ ಕೋಚ್ ಆದ ನಂತರ ಅವರಷ್ಟೇ ಸಾಮರ್ತ್ಯದ ಬೌಲಿಂಗ್ ಕೋಚ್ ಒಬ್ಬರ ಅವಶ್ಯಕತೆ ಭಾರತಕ್ಕೆ ಇತ್ತು. ಭಾರತ ಕ್ರಿಕೆಟ್ ತಂಡದ ಯಾರಾದರೂ ಮಾಜಿ ಬೌಲರ್ ಆಯ್ಕೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಅದಕ್ಕಾಗಿ ಸರಿಯಾಗಿ ಕೆಲವರ ಹೆಸರುಗಳು ಕೂಡ ಗಾಸಿಪ್ ಗಳಾಗಿ ಸುದ್ದಿಯಲ್ಲಿದ್ದವು. ಅಳೆದೂ ತೂಗಿ ಕೊನೆಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿದೇಶಿ ಆಟಗಾರರನನ್ನು ಇದಕ್ಕೆ ಆಯ್ಕೆ ಮಾಡಿದೆ. ಅವರ ಹೆಸರು ಮೋರ್ನೆ ಮೊರ್ಕೆಲ್.

ಮೋರ್ನೆ ಮೊರ್ಕೆಲ್ ಸೌತ್ ಆಫ್ರಿಕಾದ ಸ್ಟಾರ್ ಬೌಲರ್. ಅವರು 86 ಟೆಸ್ಟ್ ಪಂದ್ಯಗಳನ್ನು ಆಡಿದ್ದು 309 ವಿಕೆಟ್ ಉರುಳಿಸಿದ್ದಾರೆ. ಅದರೊಂದಿಗೆ 117 ಏಕದಿನ ಪಂದ್ಯಗಳನ್ನು ಆಡಿದ್ದು, 188 ವಿಕೆಟ್ ಕಬಳಿಸಿದ್ದಾರೆ. ಸೆಪ್ಟೆಂಬರ್ 1 ನೇ ತಾರೀಕಿನಿಂದ ಟೀಮ್ ಭಾರತದ ಬೌಲಿಂಗ್ ಕೋಚ್ ಆಗಿ ಕೆಲಸ ಶುರು ಮಾಡಲಿರೋ ಮೊರ್ಕೆಲ್ ಈ ಹಿಂದೆ ಪಾಕಿಸ್ತಾನದ ಬೌಲಿಂಗ್ ಕೋಚ್ ಕೂಡ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇವರು ಬಾಂಗ್ಲಾ ದೇಶದ ವಿರುದ್ಧ ಭಾರತದ ಟೆಸ್ಟ್ ಸರಣಿಯ ವೇಳೆಗೆ ತಂಡವನ್ನು ಸೇರಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಘೋಷಣೆ ಮಾಡುವುದು ಮಾತ್ರ ಬಾಕಿ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search