• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕನ್ನಡ ಚಿತ್ರರಂಗದ ಇವತ್ತಿನ ಪರಿಸ್ಥಿತಿಗೆ ಇದು ಒಂದು ಕಾರಣವೇ?

Tulunadu News Posted On August 17, 2024
0


0
Shares
  • Share On Facebook
  • Tweet It

ಹಸಿವೆಯಿಂದ ಸತ್ತ ಕನ್ನಡದ ಹಿಟ್ ಸಿನೆಮಾಗಳ ಕಥೆಗಾರ ಯಾರು?

ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಥೆಗಾರರಿಗೆ ಸೂಕ್ತ ಸ್ಥಾನಮಾನ ಸಿಗುವ ತನಕ ಪರಿಸ್ಥಿತಿ ಸರಿಯಾಗುವುದಾದರೂ ಹೇಗೆ ಎಂದು ಇತಿಹಾಸ ತಜ್ಞ ಧರ್ಮೇಂದ್ರ ಕುಮಾರ್ ಅವರ ವಿಡಿಯೋವೊಂದು ಸಾಕಷ್ಟು ಜನರ ಗಮನವನ್ನು ಸೆಳೆಯುತ್ತಿದೆ. ಅದರಲ್ಲಿ ಅವರು ಎಂ. ಡಿ. ಸುಂದರ್ ಎನ್ನುವ ಕನ್ನಡ ಚಲನಚಿತ್ರ ರಂಗದ ಅಜ್ಞಾತ ಕಥೆಗಾರನ ಉದಾಹರಣೆಯನ್ನು ಬಹಳ ಅರ್ಥಗರ್ಭಿತವಾಗಿ ವಿವರಿಸುತ್ತಾ ಹೋಗುತ್ತಾರೆ. ಗಂಧದ ಗುಡಿ, ಶಂಕರ್ ಗುರು, ತಾಯಿಗೆ ತಕ್ಕ ಮಗ, ಚಕ್ರವ್ಯೂಹ, ಒಲವು – ಗೆಲುವು, ತ್ರಿಮೂರ್ತಿ, ಸಿಂಗಾಪುರದಲ್ಲಿ ರಾಜಾ ಕುಳ್ಳ, ಆಟೋ ರಾಜ, ಕಿಲಾಡಿ ಕಿಟ್ಟು, ನಾರದ ವಿಜಯ, ಸಹೋದರರ ಸವಾಲು, ಅವಳ ಹೆಜ್ಜೆ, ಕಳ್ಳ ಕುಳ್ಳ, ನೀ ನನ್ನ ಗೆಲ್ಲಲಾರೆ, ಪ್ರೀತಿ ಮಾಡು ತಮಾಷೆ ನೋಡು, ಕಾರ್ಮಿಕ ಕಳ್ಳನಲ್ಲ, ಮೂಗನ ಸೇಡು ಹೀಗೆ ಅನೇಕ ಕನ್ನಡ ಚಿತ್ರಗಳಿಗೆ ಕಥೆಯನ್ನು ನೀಡಿ ಅವುಗಳ ಯಶಸ್ಸಿಗೆ ಕಾರಣರಾಗಿದ್ದ ಕಥೆಗಾರ ಎಂ ಡಿ ಸುಂದರ್ ಬೆಂಗಳೂರಿನಲ್ಲಿ ಅಂತ್ಯಕಾಲದಲ್ಲಿ ಆಹಾರ ಸಿಗದೇ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಧರ್ಮೇಂದ್ರ ಹೇಳಿದ್ದಾರೆ.

ಅಷ್ಟು ಯಶಸ್ವಿ ಸಿನೆಮಾಗಳ ಹಿಂದಿನ ಕಥೆಗಾರ ಎಂ ಡಿ ಸುಂದರ್ ಅನಾಮಿಕರಾಗಿ ಬೆಂಗಳೂರಿನಲ್ಲಿ ತಮ್ಮ ಅಂತ್ಯದ ದಿನಗಳನ್ನು ಕಾಣಬೇಕಾಯಿತು. ನಾವು ಕನ್ನಡದಲ್ಲಿ ಕಥೆಗಾರರಿಗೆ ಕೊಡುವ ಗೌರವ, ಸ್ಥಾನಮಾನ ಇದೆನಾ? ಹೀಗಿದ್ದ ಮೇಲೆ ಕನ್ನಡ ಸಿನೆಮಾ ರಂಗ ಉದ್ಧಾರವಾಗಬೇಕು ಎಂದರೆ ಎಲ್ಲಿ ಆಗುತ್ತದೆ ಎಂದು ಧರ್ಮೇಂದ್ರ ಪ್ರಶ್ನಿಸಿದ್ದಾರೆ.

ಕನ್ನಡ ಸಿನೆಮಾಗಳಿಗೆ ಕಥೆ ಇಲ್ಲ ಎಂದು ಅವಲತ್ತುಕೊಳ್ಳುವ ಸಿನೆಮಾ ನಿರ್ಮಾಪಕರು ಉತ್ತಮ ಕಥೆಗಳನ್ನು ನೀಡಿದ ಎಂ ಡಿ ಸುಂದರ್ ಸಹಿತ ಕಥೆಗಾರರಿಗೆ ಕೊಡಬೇಕಾದ ಮನ್ನಣೆ ಕೊಡದೇ ಇದ್ದ ಕಾರಣಕ್ಕೆ ಪರಿಸ್ಥಿತಿ ಹೀಗೆ ಆಗಿದೆ. ಕನ್ನಡ ಚಿತ್ರರಂಗ 60 ವರ್ಷ ತುಂಬಿದ ಪ್ರಯುಕ್ತ ಕಾರ್ಯಕ್ರಮ ಮಾಡಿ ನೆನಪಿನ ಪುಸ್ತಕ ಹೊರ ತಂದಾಗ ಅದರಲ್ಲಿ ಒಂದು ಮಾತು ಈ ಕಥೆಗಾರನ ಬಗ್ಗೆ ಇಲ್ಲ ಎಂದು ಬೇಸರಿಸಿಕೊಂಡು ಹೇಳಿರುವ ಧರ್ಮೇಂದ್ರ ಅವರು ಇಂತಹ ಸಾವಿರಾರು ಕಥೆಗಾರರು ನಿಟ್ಟುಸಿರು ಬಿಟ್ಟ ಶಾಪ ಕನ್ನಡ ಚಿತ್ರರಂಗಕ್ಕೆ ತಗಲಿದೆ. ಈಗ ಡೋಲಾಯಮಾನವಾಗಿರುವ ಕನ್ನಡ ಚಿತ್ರರಂಗ ಸುಧಾರಿಸಬೇಕಾದರೆ ಇಂತಹ ಕಥೆಗಾರರಿಗೆ, ಕಲಾವಿದರಿಗೆ, ತಂತ್ರಜ್ಞರಿಗೆ ಉತ್ತಮ ಗೌರವ, ಸ್ಥಾನಮಾನ ನೀಡಬೇಕು ಎಂದು ಧರ್ಮೇಂದ್ರ ಆಗ್ರಹಿಸಿದ್ದಾರೆ

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search