• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವೈದ್ಯೆಯ “ಹತ್ಯಾಚಾರ” ಪ್ರಕರಣದಲ್ಲಿ ಸುಪ್ರೀಂ ಸುಮೋಟೋ ನಿರ್ಧಾರ..

Tulunadu News Posted On August 19, 2024
0


0
Shares
  • Share On Facebook
  • Tweet It

ಕೊಲ್ಕೊತ್ತಾದ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸುಮೋಟೋ ಪ್ರಕರಣವನ್ನಾಗಿ ಕೈಗೆತ್ತಿಕೊಂಡಿದೆ. ಸುಮೋಟೋ ಎಂದರೆ ಕಾನೂನು ಭಾಷೆಯಲ್ಲಿ ಸ್ವಯಂ ಪ್ರೇರಿತವಾಗಿ ತೆಗೆದುಕೊಳ್ಳುವುದು. ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠ ಈ ಪ್ರಕರಣವನ್ನು ಅಗಸ್ಟ್ 20 ಕ್ಕೆ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟಿನ ಈ ನಿರ್ಧಾರ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ನ್ಯಾಯಕ್ಕಾಗಿ ಪ್ರತಿಭಟನೆ ಮತ್ತು ಪಶ್ಚಿಮ ಬಂಗಾಲದ ರಾಜ್ಯ ಸರಕಾರದ ಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿರುವ ಹೋರಾಟಗಾರರಿಗೆ ಒಂದು ಸಮಾಧಾನಕರ ಅಂಶವಾಗಿದೆ. ಭಾರತೀಯ ವೈದ್ಯಕೀಯ ಸಂಘಟನೆಗಳು ಮತ್ತು ವಿವಿಧ ಸಂಬಂಧಪಟ್ಟ ಸಂಘ ಸಂಸ್ಥೆಗಳು ಕೇಂದ್ರ ಸರಕಾರಕ್ಕೆ ಆಗ್ರಹಿಸಿ ವೈದ್ಯರ ಸುರಕ್ಷತೆಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಒತ್ತಡ ಹೇರಿರುವ ಹಿನ್ನಲೆಯಲ್ಲಿ ಸುಪ್ರೀಂಕೋರ್ಟಿನ ಈ ತೀರ್ಮಾನ ಮಹತ್ವದಾಗಿದೆ.
ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಪ್ರಕಾರ ಸಿಬಿಐ ಈಗಾಗಲೇ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಬಂಧಿತ ಪ್ರಧಾನ ಆರೋಪಿ ಸಂಜಯ್ ರಾಯ್ ನನ್ನು ವಿವಿಧ ರೀತಿಯ ಮಾನಸಿಕ ಪರೀಕ್ಷೆಗೆ ಒಳಪಡಿಸಿದೆ. ಕೇಂದ್ರದ ಫಾರೆನ್ಸಿಕ್ ವಿಜ್ಞಾನದ ಲ್ಯಾಬೋರೇಟರಿ (ಸಿಎಫ್ ಎಸ್ ಎಲ್) ರಾಯ್ ನನ್ನು ವಿಚಾರಣೆಗೆ ಒಳಪಡಿಸಿದೆ.
ಈ ಪ್ರಕರಣದಲ್ಲಿ ಮೃತ ವೈದ್ಯೆಯ ತಾಯಿ ತಮ್ಮ ಮಗಳು ಆತ್ಮಹತ್ಯೆ ಮಾಡಿದ್ದಾಳೆ ಎಂದು ಆರಂಭದಲ್ಲಿ ಆಸ್ಪತ್ರೆಯ ಕಡೆಯಿಂದ ಕರೆ ಬಂದಿತ್ತು. ನಾವು ಆಸ್ಪತ್ರೆಗೆ ಬಂದಾಗ ನಮಗೆ ತುಂಬಾ ಹೊತ್ತು ಮಗಳನ್ನು ನೋಡಲು ಅವಕಾಶ ನೀಡಿರಲಿಲ್ಲ.
ಕೊನೆಗೂ ಮೃತದೇಹವನ್ನು ನೋಡಲು ಅವಕಾಶ ನೀಡಿದಾಗ ದೇಹದ ಮೇಲೆ ಒಂದೇ ಬಟ್ಟೆಯ ತುಂಡು ಇತ್ತು. ಅವಳ ಕೈ ಮುರಿದಿತ್ತು. ಕಣ್ಣು ಮತ್ತು ಮುಖದಿಂದ ರಕ್ತ ಹೊರಬಂದಿತ್ತು ಎಂದು ಹೇಳಿದ್ದಾರೆ.
ಇನ್ನು ಸಿಬಿಐ ಈ ವಿಷಯದಲ್ಲಿ ಈ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಘೋಷ್ ಅವರ ಮೊಬೈಲನ್ನು ಕೂಡ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ದುರ್ಘಟನೆ ಸಂಭವಿಸಿದ ಮೊದಲು ಮತ್ತು ಅನಂತರ ಘೋಷ್ ಯಾರಿಗೆಲ್ಲಾ ಕರೆ ಮಾಡಿದ್ದಾರೆ ಎನ್ನುವ ವಿಷಯ ತನಿಖೆ ಆಗಲಿದೆ. ಅಷ್ಟೇ ಅಲ್ಲ, ತನಿಖಾಧಿಕಾರಿಗಳು ಆ ಫೋನ್ ಕಾಲ್ ಗಳ ಬಗ್ಗೆ ಮತ್ತು ಡಾಜಾ ಯೂಸೆಜ್ ಬಗ್ಗೆ ಮೊಬೈಲ್ ಕರೆನ್ಸಿ ಕಂಪೆನಿಗಳ ಜೊತೆಯೂ ಸಂಪರ್ಕದಲ್ಲಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ.
ಈ ವಿಷಯದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ” ನಿರಂತರ 36 ಗಂಟೆಯ ಸೇವಾವಧಿಯಲ್ಲಿ ಬಳಲಿ ಬೆಂಡಾಗಿರುವ ಸಂತ್ರಸ್ತೆಗೆ ಒಂದು ಸಣ್ಣ ವಿರಾಮದ ಅವಧಿಯಲ್ಲಿಯೂ ಸೂಕ್ತ ವಿಶ್ರಾಂತಿ ಗೃಹದ ಸೌಲಭ್ಯ ಇಲ್ಲದೇ ಇರುವುದು ಶೋಚನೀಯ. ಮಹಿಳಾ ವೈದ್ಯೆಯರ ಸುರಕ್ಷತೆ ಮತ್ತು ರಕ್ಷಣೆಯ ವಿಷಯದಲ್ಲಿ ಸಮರ್ಪಕ ಕಾನೂನು ಜಾರಿಗೆ ತರಬೇಕು ” ಎಂದು ಮನವಿ ಮಾಡಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search