• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋರಖ್‌ಪುರ ದುರಂತ ಆರೋಪಿ ಡಾ.ಖಫೀಲ್ ಖಾನ್ ಬಂಧನ

TNN Correspondent Posted On September 2, 2017
0


0
Shares
  • Share On Facebook
  • Tweet It

ಗೋರಖ್‌ಪುರ: ಗೋರಖ್‌ಪುರದ ಸರಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಮೃತಪಡಲು ಕಾರಣನಾದ ಆರೋಪದ ಮೇಲೆ ಶನಿವಾರ ಬೆಳಗ್ಗೆೆ ಆಸ್ಪತ್ರೆೆಯ ಡಾ.ಖಫೀಲ್ ಖಾನ್‌ನನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಆಸ್ಪತ್ರೆೆಯಲ್ಲಿರುವ ಆಮ್ಲಜನಕವನ್ನು ಅಕ್ರಮವಾಗಿ ತಮ್ಮ ಖಾಸಗಿ ಕ್ಲಿನಿಕ್‌ಗಾಗಿ ದುರ್ಬಳಕೆ ಮಾಡಿಕೊಂಡಿದ್ದು ಮತ್ತು ಸರಕಾರಿ ಆಸ್ಪತ್ರೆಯ ಹಣಕಾಸಿನ ವಿಚಾರದಲ್ಲಿ ಅವ್ಯವಹಾರ ನಡೆಸಿದ್ದ ಎಂದು ಖಫೀಲ್ ಖಾನ್ ವಿರುದ್ಧ ಆರೋಪಗಳಿವೆ. ಖಾಸಗಿ ಕ್ಲಿನಿಕ್‌ಗಾಗಿ ಆಮ್ಲಜನಕ ದುರ್ಬಳಕೆ ಮಾಡಿಕೊಂಡಿದ್ದರಿಂದ ನೂರಾರು ಮಕ್ಕಳು ಮೃತಪಟ್ಟಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.

ಆರಂಭದಲ್ಲಿ ನೂರಾರು ಮಕ್ಕಳ ಪ್ರಾಣ ಉಳಿಸಲು ಡಾ. ಖಫೀಲ್ ಖಾನ್ ತಮ್ಮ ಖಾಸಗಿ ಆಸ್ಪತ್ರೆೆಯಿಂದ ಆಮ್ಲಜನಕ ತರಿಸಿ ಚಿಕಿತ್ಸೆೆ ನೀಡಿ ಹೀರೋ ಆಗಿದ್ದರು .ಆದರೆ ಆಸ್ಪತ್ರೆೆಯ ಸರಬರಾಜು ವಿಭಾಗದ ಮುಖ್ಯಸ್ಥ ಆಗಿದ್ದ ಖಫೀಲ್ ಖಾನ್ ಸರಿಯಾದ ನಿರ್ವಹಣೆ ಮಾಡಿರಲಿಲ್ಲ. ಆಗಸ್‌ಟ್‌ 9ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆೆಗೆ ಭೇಟಿ ನೀಡಿದ್ದಾಗ ಆಸ್ಪತ್ರೆೆಯಲ್ಲಿ ಆಮ್ಲಜನಕ ಕೊರತೆ ಇದೆ ಎಂಬುದರ ಕುರಿತು ಸರಿಯಾದ ಮಾಹಿತಿ ನೀಡಿರಲಿಲ್ಲ ಎಂಬ ಆರೋಪವೂ ಡಾ.ಖಫೀಲ್ ಖಾನ್ ವಿರುದ್ಧ ಇದೆ. ಸದ್ಯ ಆರೋಫಿ ಖಫೀಲ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್‌ ನಲ್ಲಿ 415 ಮಕ್ಕಳು ಮೃತಪಟ್ಟಿದ್ದರು.

 

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search