• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೊಲ್ಕೊತ್ತಾ ಪ್ರಕರಣದ ತನಿಖೆಗೆ ಸಿಬಿಐ ಆಫೀಸರ್ ಸೀಮಾ ಪಹುಜಾ ನೇಮಕ! ಯಾರಿವರು?

Tulunadu News Posted On August 21, 2024
0


0
Shares
  • Share On Facebook
  • Tweet It

ಕ್ರೈಂ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಇದರಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಂಡ ಚಾಣಾಕ್ಷ ಅಧಿಕಾರಿ ಯಾರು ಎನ್ನುವ ಪ್ರಶ್ನೆ ಉದ್ಭವಿಸಿದರೆ ಅದಕ್ಕೆ ಸಂಶಯವೇ ಇಲ್ಲದೇ ಸಿಗುವ ಮೊದಲ ಉತ್ತರ ಸೀಮಾ ಪಹುಜಾ. ಇಂತಹ ಪ್ರಕರಣಗಳಲ್ಲಿ ಯಾವುದೇ ಸಂಶಯಗಳಿಗೆ ಆಸ್ಪದೆ ನೀಡದೇ ತನಿಖೆ ಮಾಡಬಲ್ಲ ಅಧಿಕಾರಿ ಸೀಮಾ ಪಹುಜಾ. ಅಂತಹ ಅಧಿಕಾರಿಯನ್ನೇ ಕೊಲ್ಕೋತ್ತಾದ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾ ತಂಡದ ಮುಖ್ಯಸ್ಥರನ್ನಾಗಿ ನೇಮಿಸಿ ಕಳುಹಿಸಿಕೊಡಲಾಗಿದೆ. ಯಾಕೆಂದರೆ ಕೊಲ್ಕೊತ್ತಾದ ಪ್ರಕರಣ ಮೇಲ್ನೋಟಕ್ಕೆ ಕಾಣುವಷ್ಟು ಸುಲಭವಾಗಿಲ್ಲ. ಅದರ ಬುಡದ ತನಕ ಹೋದರೆ ಮಾತ್ರ ಈ ಪ್ರಕರಣದ ಇಡೀ ಜಾಡು ಹಿಡಿಯಲು ಸಾಧ್ಯ. ಇಂತಹ ಸಂದ್ಧಿಗ್ನ ಪ್ರಕರಣಗಳಲ್ಲಿ 2007 ರಿಂದ 2018 ರ ನಡುವೆ ಕಾರ್ಯ ನಿರ್ವಹಿಸಿ ಅನುಭವ ಇರುವ ಸೀಮಾ ಈ ಪ್ರಕರಣಕ್ಕೂ ಸೂಕ್ತ ಎಂದು ಸಿಬಿಐ ಉನ್ನತ ಅಧಿಕಾರಿಗಳು ನಿರ್ಧರಿಸಿ ಈ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ಇಂತಹ ಜಟಿಲ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾದ ಕಾರಣಕ್ಕೆ ಸೀಮಾ ಅವರಿಗೆ ಎರಡು ಬಾರಿ ಬಂಗಾರದ ಪದಕ ನೀಡಿ ಗೌರವಿಸಲಾಗಿದೆ.

ಶಿಮ್ಲಾದ ನಡೆದಿದ್ದ “ಗುಡಿಯಾ” ಪ್ರಕರಣದಲ್ಲಿ ವೈಜ್ಞಾನಿಕ ವಿಧಾನವನ್ನು ಬಳಸಿ ಆರೋಪಿಗಳನ್ನು ಪತ್ತೆ ಹಚ್ಚಿ ಇಲಾಖೆಯಲ್ಲಿ ಶಹಬ್ಬಾಷ್ ಗಿರಿ ಪಡೆದುಕೊಂಡಿದ್ದ ಸೀಮಾ ಸಿಬಿಐಯಲ್ಲಿ ಹಂತಹಂತವಾಗಿ ಪ್ರವರ್ಧಮಾನಕ್ಕೆ ಬಂದಿದ್ದರು. ಒಂದು ಹಂತದಲ್ಲಿ ವೈಯಕ್ತಿಕ ಕೌಟುಂಬಿಕ ಜವಾಬ್ದಾರಿಗಳ ಕಾರಣದಿಂದ ಸ್ವಯಂ ನಿವೃತ್ತಿಯನ್ನು ಪಡೆದುಕೊಳ್ಳುವ ತೀರ್ಮಾನಕ್ಕೆ ಬಂದಿದ್ದ ಸೀಮಾ ಅವರನ್ನು ಅಂದಿನ ಸಿಬಿಐ ನಿರ್ದೇಶಕರು ಉದ್ಯೋಗದಿಂದ ಹಿಂದೆ ಸರಿಯದಂತೆ ಮನ ಒಲಿಸಿದ್ದರು. ಯಾವುದೇ ಬಾಹ್ಯ ಒತ್ತಡಕ್ಕೆ ಮಣಿಯದೇ ತನ್ನ ಕೆಲಸ ನಿರ್ವಹಿಸಿ ಕೈ ಹಾಕಿದ ಪ್ರಕರಣದಲ್ಲಿ ಯಶಸ್ಸು ಕಾಣುವುದೇ ಸೀಮಾ ಅವರ ಚಾಕಚಕ್ಯತೆ.

ಕೊಲ್ಕೊತ್ತಾ ಪ್ರಕರಣ ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ವ್ಯಾಪಕ ಪ್ರತಿಭಟನೆಗಳು ನಡೆದು ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇಂತಹ ಸಂದರ್ಭದಲ್ಲಿ ಒಬ್ಬರು ದಕ್ಷ ಅಧಿಕಾರಿಯ ಅವಶ್ಯಕತೆ ಇದ್ದೇ ಇತ್ತು. ಹತ್ರಾಸ್ ಪ್ರಕರಣದಲ್ಲಿಯೂ ಸೀಮಾ ಅವರೇ ಮುಂಚೂಣಿಯಲ್ಲಿ ನಿಂತು ಆರೋಪಿಗಳಿಗೆ ಸಿಬಿಐ ತನಿಖೆಯ ರುಚಿ ತೋರಿಸಿದ್ದರು. ಅಂತಹ ದಿಟ್ಟೆ ಈಗ ಕೊಲ್ಕೊತ್ತಾದ ಪ್ರಕರಣದಲ್ಲಿಯೂ ಸೂಕ್ತ ಕ್ರಮಗಳನ್ನು ಯಶಸ್ವಿಯಾಗಲಿ ಎನ್ನುವುದು ಎಲ್ಲಾ ಸಜ್ಜನರ ಪ್ರಾರ್ಥನೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search