• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಶರದ್ ಪವಾರ್ ಅವರಿಗೆ ಇನ್ನು ಝಡ್ ಪ್ಲಸ್ ಭದ್ರತೆ! ಯಾಕೆ?

Tulunadu News Posted On August 23, 2024
0


0
Shares
  • Share On Facebook
  • Tweet It

ಕೇಂದ್ರ ಸರಕಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ- ಎಸ್ ಪಿ)ಯ ಮುಖಂಡ ಶರದ್ ಪವಾರ್ ಅವರಿಗೆ ಇನ್ನು ವಿಶೇಷ ಗಣ್ಯರಿಗೆ ಮಾತ್ರ ನೀಡುವ ಝಡ್ ಪ್ಲಸ್ ಭದ್ರತಾ ವ್ಯವಸ್ಥೆಯನ್ನು ನೀಡಲು ತೀರ್ಮಾನಿಸಿದೆ. ಕೇಂದ್ರದ ಗೃಹ ಸಚಿವಾಲಯ ಮಹಾರಾಷ್ಟ್ರದ ಮಹಾನಾಯಕನಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ( ಸಿಆರ್ ಪಿಎಫ್) ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇನ್ನು ಮುಂದೆ ಸಿಆರ್ ಪಿಎಫ್ ಇದರ 55 ಯೋಧರು 83 ವರ್ಷದ ಶರದ್ ಪವಾರ್ ಅವರ ಸುರಕ್ಷತಾ ವಲಯದಲ್ಲಿ ಯಾವತ್ತೂ ಕಾವಲು ಕಾಯುತ್ತಿರುತ್ತಾರೆ.
ಸಾಮಾನ್ಯವಾಗಿ ದೇಶದ ಉನ್ನತ ನಾಯಕರ ಭದ್ರತೆಯ ಬಗ್ಗೆ ಆಗಾಗ ಪರಿಶೀಲನಾ ಸಭೆ ಕೇಂದ್ರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಯಾರಿಗಾದರೂ ಬೆದರಿಕೆ ಇದ್ದಲ್ಲಿ ಅಥವಾ ಗುಪ್ತಚರ ಇಲಾಖೆಯಿಂದ ಇಂತಿಂತವರ ಮೇಲೆ ಏನಾದರೂ ದಾಳಿ ಸಂಭವಿಸಬಹುದು ಎನ್ನುವ ಮುನ್ಸೂಚನೆ ಇದ್ದಲ್ಲಿ ಕೇಂದ್ರ ಗೃಹ ಸಚಿವಾಲಯ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ವಿವಿಐಪಿಗಳಿಗೆ ನೀಡುವ ಸುರಕ್ಷತಾ ವ್ಯವಸ್ಥೆಗಳಲ್ಲಿ ವಿವಿಧ ಹಂತಗಳು ಇದ್ದು, ಏಕ್ಸ್, ವೈ, ವೈ ಪ್ಲಸ್, ಝಡ್, ಝಡ್ ಪ್ಲಸ್ ಕ್ಯಾಟಗರಿ ಇರುತ್ತದೆ.
ಈಗಾಗಲೇ ಶರದ್ ಪವಾರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸುವ ತಂಡ ಮಹಾರಾಷ್ಟ್ರಕ್ಕೆ ಬಂದಿಳಿದಿದ್ದು, ಪವಾರ್ ಅವರ ಸುರಕ್ಷತೆಯ ಹೊಣೆಯನ್ನು ಕೈಗೆತ್ತಿಕೊಂಡಿದೆ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆಗಳು ನಡೆಯಲಿದ್ದು, ಈ ಹಂತದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸದಂತೆ ಈ ಮುಂಜಾಗ್ರತಾ ಕ್ರಮ ಪ್ರಾಮುಖ್ಯವೆನಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search