• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಶರದ್ ಪವಾರ್ ಅವರಿಗೆ ಇನ್ನು ಝಡ್ ಪ್ಲಸ್ ಭದ್ರತೆ! ಯಾಕೆ?

Tulunadu News Posted On August 23, 2024
0


0
Shares
  • Share On Facebook
  • Tweet It

ಕೇಂದ್ರ ಸರಕಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ- ಎಸ್ ಪಿ)ಯ ಮುಖಂಡ ಶರದ್ ಪವಾರ್ ಅವರಿಗೆ ಇನ್ನು ವಿಶೇಷ ಗಣ್ಯರಿಗೆ ಮಾತ್ರ ನೀಡುವ ಝಡ್ ಪ್ಲಸ್ ಭದ್ರತಾ ವ್ಯವಸ್ಥೆಯನ್ನು ನೀಡಲು ತೀರ್ಮಾನಿಸಿದೆ. ಕೇಂದ್ರದ ಗೃಹ ಸಚಿವಾಲಯ ಮಹಾರಾಷ್ಟ್ರದ ಮಹಾನಾಯಕನಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ( ಸಿಆರ್ ಪಿಎಫ್) ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇನ್ನು ಮುಂದೆ ಸಿಆರ್ ಪಿಎಫ್ ಇದರ 55 ಯೋಧರು 83 ವರ್ಷದ ಶರದ್ ಪವಾರ್ ಅವರ ಸುರಕ್ಷತಾ ವಲಯದಲ್ಲಿ ಯಾವತ್ತೂ ಕಾವಲು ಕಾಯುತ್ತಿರುತ್ತಾರೆ.
ಸಾಮಾನ್ಯವಾಗಿ ದೇಶದ ಉನ್ನತ ನಾಯಕರ ಭದ್ರತೆಯ ಬಗ್ಗೆ ಆಗಾಗ ಪರಿಶೀಲನಾ ಸಭೆ ಕೇಂದ್ರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಯಾರಿಗಾದರೂ ಬೆದರಿಕೆ ಇದ್ದಲ್ಲಿ ಅಥವಾ ಗುಪ್ತಚರ ಇಲಾಖೆಯಿಂದ ಇಂತಿಂತವರ ಮೇಲೆ ಏನಾದರೂ ದಾಳಿ ಸಂಭವಿಸಬಹುದು ಎನ್ನುವ ಮುನ್ಸೂಚನೆ ಇದ್ದಲ್ಲಿ ಕೇಂದ್ರ ಗೃಹ ಸಚಿವಾಲಯ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ವಿವಿಐಪಿಗಳಿಗೆ ನೀಡುವ ಸುರಕ್ಷತಾ ವ್ಯವಸ್ಥೆಗಳಲ್ಲಿ ವಿವಿಧ ಹಂತಗಳು ಇದ್ದು, ಏಕ್ಸ್, ವೈ, ವೈ ಪ್ಲಸ್, ಝಡ್, ಝಡ್ ಪ್ಲಸ್ ಕ್ಯಾಟಗರಿ ಇರುತ್ತದೆ.
ಈಗಾಗಲೇ ಶರದ್ ಪವಾರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸುವ ತಂಡ ಮಹಾರಾಷ್ಟ್ರಕ್ಕೆ ಬಂದಿಳಿದಿದ್ದು, ಪವಾರ್ ಅವರ ಸುರಕ್ಷತೆಯ ಹೊಣೆಯನ್ನು ಕೈಗೆತ್ತಿಕೊಂಡಿದೆ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆಗಳು ನಡೆಯಲಿದ್ದು, ಈ ಹಂತದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸದಂತೆ ಈ ಮುಂಜಾಗ್ರತಾ ಕ್ರಮ ಪ್ರಾಮುಖ್ಯವೆನಿಸಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search