• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶರದ್ ಪವಾರ್ ಅವರಿಗೆ ಇನ್ನು ಝಡ್ ಪ್ಲಸ್ ಭದ್ರತೆ! ಯಾಕೆ?

Tulunadu News Posted On August 23, 2024


  • Share On Facebook
  • Tweet It

ಕೇಂದ್ರ ಸರಕಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ- ಎಸ್ ಪಿ)ಯ ಮುಖಂಡ ಶರದ್ ಪವಾರ್ ಅವರಿಗೆ ಇನ್ನು ವಿಶೇಷ ಗಣ್ಯರಿಗೆ ಮಾತ್ರ ನೀಡುವ ಝಡ್ ಪ್ಲಸ್ ಭದ್ರತಾ ವ್ಯವಸ್ಥೆಯನ್ನು ನೀಡಲು ತೀರ್ಮಾನಿಸಿದೆ. ಕೇಂದ್ರದ ಗೃಹ ಸಚಿವಾಲಯ ಮಹಾರಾಷ್ಟ್ರದ ಮಹಾನಾಯಕನಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ( ಸಿಆರ್ ಪಿಎಫ್) ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇನ್ನು ಮುಂದೆ ಸಿಆರ್ ಪಿಎಫ್ ಇದರ 55 ಯೋಧರು 83 ವರ್ಷದ ಶರದ್ ಪವಾರ್ ಅವರ ಸುರಕ್ಷತಾ ವಲಯದಲ್ಲಿ ಯಾವತ್ತೂ ಕಾವಲು ಕಾಯುತ್ತಿರುತ್ತಾರೆ.
ಸಾಮಾನ್ಯವಾಗಿ ದೇಶದ ಉನ್ನತ ನಾಯಕರ ಭದ್ರತೆಯ ಬಗ್ಗೆ ಆಗಾಗ ಪರಿಶೀಲನಾ ಸಭೆ ಕೇಂದ್ರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಯಾರಿಗಾದರೂ ಬೆದರಿಕೆ ಇದ್ದಲ್ಲಿ ಅಥವಾ ಗುಪ್ತಚರ ಇಲಾಖೆಯಿಂದ ಇಂತಿಂತವರ ಮೇಲೆ ಏನಾದರೂ ದಾಳಿ ಸಂಭವಿಸಬಹುದು ಎನ್ನುವ ಮುನ್ಸೂಚನೆ ಇದ್ದಲ್ಲಿ ಕೇಂದ್ರ ಗೃಹ ಸಚಿವಾಲಯ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ವಿವಿಐಪಿಗಳಿಗೆ ನೀಡುವ ಸುರಕ್ಷತಾ ವ್ಯವಸ್ಥೆಗಳಲ್ಲಿ ವಿವಿಧ ಹಂತಗಳು ಇದ್ದು, ಏಕ್ಸ್, ವೈ, ವೈ ಪ್ಲಸ್, ಝಡ್, ಝಡ್ ಪ್ಲಸ್ ಕ್ಯಾಟಗರಿ ಇರುತ್ತದೆ.
ಈಗಾಗಲೇ ಶರದ್ ಪವಾರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸುವ ತಂಡ ಮಹಾರಾಷ್ಟ್ರಕ್ಕೆ ಬಂದಿಳಿದಿದ್ದು, ಪವಾರ್ ಅವರ ಸುರಕ್ಷತೆಯ ಹೊಣೆಯನ್ನು ಕೈಗೆತ್ತಿಕೊಂಡಿದೆ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆಗಳು ನಡೆಯಲಿದ್ದು, ಈ ಹಂತದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸದಂತೆ ಈ ಮುಂಜಾಗ್ರತಾ ಕ್ರಮ ಪ್ರಾಮುಖ್ಯವೆನಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search