• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಕ್ಷೀರಭಾಗ್ಯ ಹಾಲಿನ ಹುಡಿ ಹೈದ್ರಾಬಾದಿನಲ್ಲಿ ಪತ್ತೆ!

Tulunadu News Posted On August 26, 2024
0


0
Shares
  • Share On Facebook
  • Tweet It

ಹೈದ್ರಾಬಾದಿನ ಪೊಲೀಸ್ ಕಮೀಷನರ್ ಅವರ ವಿಶೇಷ ಟಾಸ್ಕ್ ಪೋರ್ಸ್ ತಂಡ ಹೈದ್ರಾಬಾದಿನ ದಕ್ಷಿಣ – ಪೂರ್ವ ವಲಯದಲ್ಲಿ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳೊಂದಿಗೆ ಸೇರಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಹಳ ಮಹತ್ತರವಾದ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ವಿಜಯಪುರ ಕಾಲೋನಿಯ ತಾರನಕ ಎಂಬ ಏರಿಯಾದಲ್ಲಿ ನಡೆದ ಈ ದಾಳಿಯಲ್ಲಿ 5,280 ಕೆಜಿ ಅವಧಿ ಮೀರಿದ ಹಾಲಿನ ಪೌಡರ್ ಗಳ ಪೊಟ್ಟಣಗಳನ್ನು ಪತ್ತೆ ಮಾಡಿದ್ದಾರೆ. ಇದು ಸುಮಾರು 11.5 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳಾಗಿದ್ದು, ಈ ಪ್ರಕರಣದಲ್ಲಿ ಚಿತ್ತಬೊಯಿನ ದಾಮೋದರ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಈ ಹಾಲಿನ ಪೌಡರ್ ಕರ್ನಾಟಕದ ಕ್ಷೀರ ಭಾಗ್ಯ ಯೋಜನೆಯಲ್ಲಿ ಹಂಚಬೇಕಾಗಿತ್ತು. ಇದರ ಪ್ಯಾಕೇಟ್ ಗಳ ಮೇಲೆ ” ನಾಟ್ ಫಾರ್ ಸೇಲ್” ಎಂದು ಬರೆಯಲಾಗಿದೆ. ಅದನ್ನು ಮಾರುವುದು ಕಾನೂನು ಪ್ರಕಾರ ಅಪರಾಧ ಎಂದು ಗೊತ್ತಿದ್ದರೂ ಮಾರಲಾಗುತ್ತಿರುವುದನ್ನು ಗಮನಿಸುವಾಗ ಇದರ ಹಿಂದೆ ಬಹಳ ದೊಡ್ಡ racket ಇರುವ ಸಂಶಯ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಟಾಸ್ಕ್ ಪೋರ್ಸ್ ಡಿಸಿಪಿ ವೈ ವಿ ಎಸ್ ಸುಧೀಂದ್ರ ” ಆರೋಪಿ ಸಿಕಂದರಾಬಾದಿನ ಬೋಳಕಪುರದ ನಿವಾಸಿಯಾಗಿದ್ದು, ಅವಧಿ ಮೀರಿದ ನಂದಿನಿ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕರ್ನಾಟಕದ ಶೋಲಾಪುರದ ರವಿಕಿರಣ್ ಅವರಿಂದ ಖರೀದಿಸುತ್ತಿದ್ದ. ಇದನ್ನು ಪ್ರತಿ ಕೆಜಿಗೆ 210 ರೂಪಾಯಿಯಂತೆ ಮಾರುತ್ತಿದ್ದ. ಅದರ ಮೇಲೆ ಮಾರುವಂತಿಲ್ಲ ಎನ್ನುವ ಲೇಬಲ್ ಇದ್ದರೂ ಜನರು ಅದನ್ನು ಖರೀದಿಸುತ್ತಿದ್ದರು. ಪನ್ನೀರ್, ಸ್ಪೀಟ್ಸ್ ಮತ್ತು ರೋಡ್ ಸೈಡ್ ಟೀ ಮಾರುವವರು ಇವನಿಂದ ಈ ಅವಧಿ ಮೀರಿದ ಹಾಲಿನ ಪೌಡರ್ ಖರೀದಿಸುತ್ತಿದ್ದರು. ಕರ್ನಾಟಕದ ಕ್ಷೀರಭಾಗ್ಯ ಹಾಲಿನ ಹುಡಿ ಅವಧಿ ಮೀರಿದ ಬಳಿಕ ಅಲ್ಲಿಗೆ ಹೋಗಿ ಹೋಯಿತು ಎನ್ನುವುದರ ತನಿಖೆ ನಡೆಯಬೇಕಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ, 2009 ಈ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search