• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊಲ್ಕೊತ್ತಾ “ಹತ್ಯಾಚಾರ” ಆರೋಪಿ ಬಳಸುತ್ತಿದ್ದ ಬೈಕ್ ಪೊಲೀಸ್ ಕಮೀಷನರದ್ದು!

Tulunadu News Posted On August 27, 2024
0


0
Shares
  • Share On Facebook
  • Tweet It

ಕೊಲ್ಕೊತ್ತಾದಲ್ಲಿ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಧಾನ ಆರೋಪಿ ಸಂಜಯ್ ರಾಯ್ ನಿತ್ಯ ಬಳಸುತ್ತಿದ್ದ ಬೈಕ್ ಯಾರದ್ದು ಗೊತ್ತೆ? ಕೊಲ್ಕೊತ್ತಾ ಪೊಲೀಸ್ ಕಮೀಷನರ್ ಅವರದ್ದು. ಆರೋಪಿ ಸಂಜಯ್ ರಾವ್ ಇದೇ ಬೈಕ್ ಅನ್ನು ಚಲಾಯಿಸಿ ಉತ್ತರ ಕೊಲ್ಕೊತ್ತಾದಲ್ಲಿರುವ ರೆಡ್ ಲೈಟ್ ಏರಿಯಾಗೆ ಈ ಪ್ರಕರಣ ನಡೆದ ದಿನ ಹೋಗಿ ಬಂದಿದ್ದ ಎನ್ನುವ ಮಾಹಿತಿ ತನಿಖಾಧಿಕಾರಿಗಳಿಗೆ ಸಿಕ್ಕಿದೆ. 2014 ರಲ್ಲಿ ಆ ಬೈಕ್ ನೋಂದಾವಣೆಯಾಗಿದೆ. ಆ ಬೈಕಿನ ಮೇಲೆ ‘ಪೊಲೀಸ್’ ಎಂದು ಬರೆಯಲಾಗಿದೆ.

ಸಂಜಯ್ ರಾಯ್ ಕೊಲ್ಕೊತ್ತಾ ಪೊಲೀಸರ ಬಳಿ ನಾಗರಿಕ ಸೇವೆಯಲ್ಲಿ ಇದ್ದಾನೆ. ಅವನ ಬಳಿ ಪೊಲೀಸ್ ಕಮೀಷನರ್ ಅವರ ಬೈಕ್ ಹೇಗೆ ಬಂತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಅಧಿಕಾರಿಗಳು ” ಪೊಲೀಸ್ ಇಲಾಖೆಯಲ್ಲಿ ನೊಂದಾವಣೆಯಾಗಿರುವ ಎಲ್ಲಾ ವಾಹನಗಳು ಕಮೀಷನರ್ ಅವರ ಹುದ್ದೆಯ ಹೆಸರಿನಲ್ಲಿಯೇ ನೊಂದಾವಣೆಯಾಗಿ ನಂತರ ಅದನ್ನು ಯಾರು ಕರ್ತವ್ಯದಲ್ಲಿ ಬಳಸುತ್ತಾರೋ ಅವರಿಗೆ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆಯ ಬೈಕ್ ಆರೋಪಿಯ ಬಳಿಯಲ್ಲಿ ಇತ್ತು. ಇಲ್ಲಿ ಸಂಜಯ್ ರಾಯ್ ನಾಗರಿಕ ಪೊಲೀಸ್ ಆಗಿ ಕೆಲಸ ಮಾಡುವ ನೆಪದಲ್ಲಿ ಆ ಹುದ್ದೆಯನ್ನು ತನ್ನ ಕುಕೃತ್ಯಗಳಿಗೆ ಗುರಾಣಿಯಂತೆ ಬಳಸುತ್ತಿದ್ದ ಎಂದು ಹೇಳಲಾಗುತ್ತಿದೆ.

ಸಂಜಯ್ ರಾಯ್ ಈ ಬೈಕ್ ಅನ್ನು ತನ್ನ ವೈಯಕ್ತಿಕ ತೆವಳಿಗೆ ಬಳಸಿದ ಸಾಧ್ಯತೆ ಇದ್ದಂತೆ ಕಾಣುತ್ತದೆ. ಯಾಕೆಂದರೆ ಪೊಲೀಸ್ ಇಲಾಖೆಯ ವಾಹನವನ್ನು ಉಪಯೋಗಿಸುತ್ತಿದ್ದ ಎಂದರೆ ಅವನನ್ನು ಯಾರೂ ತಡೆಯುವಂತಿರಲಿಲ್ಲ. ಆದ್ದರಿಂದ ಅವನಿಗೆ ಒಂದು ರೀತಿಯಲ್ಲಿ ಏನೂ ಕೆಲಸ ಮಾಡಲು ಕೂಡ ಒಂದು ಪರ್ಮಿಟ್ ಸಿಕ್ಕಿದ್ದಂತೆ ಆಗುತ್ತಿತ್ತಾ ಎನ್ನುವುದನ್ನು ಸಿಬಿಐ ತನಿಖೆಯ ಮೂಲಕವೂ ಪತ್ತೆಹಚ್ಚಲಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search