• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಡುಪಿ ಮಠದ ಹೊರಗೆ ನಡೆಯುತ್ತಿದೆ ಇಂತಹ ಗುಪ್ತ ವ್ಯವಹಾರ!

Tulunadu News Posted On September 18, 2024
0


0
Shares
  • Share On Facebook
  • Tweet It

ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠ ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲ, ಇಡೀ ರಾಜ್ಯಕ್ಕೆ, ರಾಷ್ಟ್ರಕ್ಕೆ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ತುಂಬಾ ಪ್ರಸಿದ್ಧವಾಗಿರುವ ತಾಣ. ಪ್ರಪಂಚದ ವಿವಿಧ ಭಾಗಗಳಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಹಿಂದೂ ಆಸ್ತಿಕರು ಕೃಷ್ಣ ಜನ್ಮಾಷ್ಟಮಿ ಸಹಿತ ವರ್ಷದ ವಿವಿಧ ಹಬ್ಬಗಳು, ರಥೋತ್ಸವದ ದಿನಗಳಲ್ಲಿ ಸಾಗರೋಪಾದಿಯಲ್ಲಿ ಇಲ್ಲಿ ಹರಿದು ಬರುತ್ತಾರೆ. ಇಂತಹ ಉಡುಪಿಯ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ವಿವಿಧ ಮಳಿಗೆಗಳು, ಸಣ್ಣಪುಟ್ಟ ಅಂಗಡಿಗಳು ಇವೆ. ಕೃಷ್ಣಮಠದ ಪರಿಸರ ಎಂದ ಕೂಡಲೇ ಇಲ್ಲಿ ಹಿಂದೂಗಳು ಮಾತ್ರ ವ್ಯಾಪಾರ ಮಾಡುತ್ತಾರೆ ಎನ್ನುವ ನಂಬಿಕೆ ಎಲ್ಲರದ್ದು. ಹಿಂದೂ ದೇವಸ್ಥಾನಗಳ ಆವರಣಗಳಲ್ಲಿ, ಹಿಂದೂಗಳ ಹಬ್ಬ, ಹರಿದಿನಗಳ ಸಂದರ್ಭದಲ್ಲಿ ಅಲ್ಲಿನ ಜಾತ್ರೆಗಳಲ್ಲಿ ಹಿಂದೂಗಳು ಅಂಗಡಿಗಳನ್ನು ಹಾಕುವ ವಿಚಾರಕ್ಕೆ ಈಗಾಗಲೇ ಈ ಬಗ್ಗೆ ಸಾಕಷ್ಟು ಚರ್ಚೆ, ವಾದ, ವಿವಾದಗಳು ನಡೆದು ವಿಷಯ ತಾರಕಕ್ಕೆ ಏರಿ ಹೋಗಿದೆ. ಜಾತ್ರೆಗಳ ಸಂದರ್ಭಗಳಲ್ಲಿ ದೇವಸ್ಥಾನದ ಹೊರಗೆ ಹಿಂದೂಗಳು ಮಾತ್ರ ಅಂಗಡಿಗಳನ್ನು ತೆರೆಯಬೇಕೆಂಬ ವಿಷಯ ಸಾಕಷ್ಟು ಮುನ್ನಲೆಗೆ ಬಂದ ಕಾರಣ ಮುಸ್ಲಿಮರು ಅದಕ್ಕೆ ಪ್ರತಿರೋಧ ಒಡಿದ್ದರೂ ನಂತರ ಆ ವಿಷಯ ಅಲ್ಲಿಗೆ ತಣ್ಣಗಾಗಿತ್ತು.

ಕರಾವಳಿಯಲ್ಲಿ ಪರಿಸ್ಥಿತಿ ಹೀಗಿರುವಾಗ ಉಡುಪಿ ಶ್ರೀಕೃಷ್ಣ ಮಠದ ಕನಕನ ಕಿಂಡಿಯ ಸಮೀಪವೇ ಹಣ್ಣುಗಳನ್ನು ಮಾರುವ ಅಂಗಡಿಯಲ್ಲಿ ನಡೆದ ಘಟನೆಯ ಬಗ್ಗೆ ಭಕ್ತರೊಬ್ಬರ ಅನುಭವ ಈಗ ವೈರಲ್ ಆಗಿದೆ. ಆ ಹಣ್ಣಿನ ಅಂಗಡಿಯಲ್ಲಿ ಹಣ್ಣುಗಳನ್ನು ಖರೀದಿ ಮಾಡಿದ ಗ್ರಾಹಕರೊಬ್ಬರು ಫೋನ್ ಪೇ ಮೂಲಕ ಹಣ ಪಾವತಿಸಲು ನಿರ್ಧರಿಸಿದ್ದರು. ಅದಕ್ಕಾಗಿ ತಮ್ಮ ಮೊಬೈಲ್ ಫೋನ್ ತೆಗೆದು ಅಲ್ಲಿದ್ದ ಕ್ಯೂ ಆರ್ ಕೋಡ್ ಮೇಲೆ ಹಿಡಿಯಬೇಕು ಎನ್ನುವಷ್ಟರಲ್ಲಿ ಆ ಅಂಗಡಿಯವನು ಆ ಕ್ಯೂ ಆರ್ ಕೋಡ್ ನಲ್ಲಿ ಬೇಡಾ, ಇನ್ನೊಂದರಲ್ಲಿ ಮಾಡಿ ಎಂದು ಬೇರೆ ಕ್ಯೂ ಆರ್ ಕೋಡ್ ಅವರ ಎದುರು ಹಿಡಿದಿದ್ದಾನೆ. ಫೋನ್ ಪೇ ಮೂಲಕ ಹಣ ಪಾವತಿಸುವವರಿಗೆ ತಾವು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವಾಗ ಹಣ ಯಾರ ಅಕೌಂಟಿಗೆ ಹೋಗುತ್ತೆ ಎನ್ನುವ ವಿಷಯ ಗೊತ್ತಾಗುತ್ತದೆ. ಹಾಗೆ ಇಲ್ಲಿಯೂ ಈ ಗ್ರಾಹಕರು ಹಣ ಪಾವತಿಸಲು ಸ್ಕ್ಯಾನ್ ಮಾಡುವಾಗ ಜಮೀರ್ ಖಾನ್ ಧಾರವಾಡ ಎನ್ನುವವರ ಹೆಸರನ್ನು ಸೂಚಿಸುತ್ತಿತ್ತು. ಇದರಿಂದ ಆ ಭಕ್ತರು ಆಶ್ಚರ್ಯಚಕಿತರಾಗಿದ್ದಾರೆ. ದೇವರ ಸನ್ನಿಧಿಯಿಂದ ಕೆಲವೇ ಗಜಗಳ ದೂರದಲ್ಲಿ ಹೀಗೆ ಎದುರಿಗೆ ಒಂದು, ಹಿಂದೆ ಒಂದು ಆಟ ನಡೆಯುತ್ತಿದ್ದರೆ, ಇನ್ನು ಬೇರೆಡೆ ಹೇಗಿರಬೇಡಾ. ಇದು ಒಬ್ಬ ಭಕ್ತನ ನಂಬಿಕೆಗೆ ವಿರೋಧವಾಗಿರುವುದಕ್ಕೆ ಯಾವುದೇ ಸಂಶಯವಿಲ್ಲ.

ಮೇಲ್ನೋಟಕ್ಕೆ ಹಿಂದೂ ಅಂಗಡಿ ತರಹ ಬಿಂಬಿಸಿ, ಯಾರೋ ದೂರದ ಭಕ್ತರು ಬಂದಾಗ ಅವರು ಫೋನ್ ಪೇ ಮಾಡಬೇಕು ಎಂದು ಅಂದುಕೊಳ್ಳುವಷ್ಟರಲ್ಲಿ ಬೇರೆ ಕ್ಯೂ ಆರ್ ಕೋಡ್ ಎದುರಿಟ್ಟು ವಂಚನಾ ಕೃತ್ಯ ಮಾಡುವ ಈ ಕಾಣದ ಕೈಗಳ ಮೋಸದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಕೃಷ್ಣ ಭಕ್ತರ ಆಶಯ

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search