• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಾಸಗಿ ಆಸ್ಪತ್ರೆಯ ಯಡವಟ್ಟು: ತನಿಖೆಗೆ ಆದೇಶ

Tulunadu News Posted On September 18, 2024
0


0
Shares
  • Share On Facebook
  • Tweet It

ಪುಟ್ಟ ಕಂದಮ್ಮಳ ಜೀವಕ್ಕೆ ಸಂಚಕಾರ ತರುವಂತಹ ತಪ್ಪು ವರದಿ ನೀಡಿ ಪೋಷಕರ ಆತಂಕಕ್ಕೆ ಕಾರಣವಾಗಿದ್ದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯ ವಿರುದ್ಧ ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಸುರತ್ಕಲ್ ಸಸಿಹಿತ್ಲುವಿನ ರಾಮ ಸಾಲ್ಯಾನ್ ಎಂಬ ವ್ಯಕ್ತಿ ತಮ್ಮ 4 ತಿಂಗಳ ಪುಟ್ಟ ಮಗುವಿಗೆ ಚುಚ್ಚುಮದ್ದು ನೀಡಿಸಲೆಂದು ಪತ್ನಿ ಸಮೇತ ಮಂಗಳೂರಿನ ಹೊರವಲಯದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಮಗುವಿನ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಥೈರಾಯಿಡ್ ಲಕ್ಷಣಗಳ ಪರಿಶೀಲನೆಗೆ ಲ್ಯಾಬ್‌ ಗೆ ಬರೆದುಕೊಟ್ಟಿದ್ದರು. ಪರೀಕ್ಷೆ ನಡೆಸಿದ ಲ್ಯಾಬ್ ಸಿಬ್ಬಂದಿಗಳು ಮಗುವಿಗೆ ಥೈರಾಯಿಡ್ ಸಮಸ್ಯೆ ಇರುವುದಾಗಿ ವರದಿ ನೀಡಿದ್ದು, ವೈದ್ಯರು ಅದಕ್ಕೆ ಮೂರು ತಿಂಗಳುಗಳ ಕಾಲ ನಿರಂತರವಾಗಿ ಔಷಧಿ ನೀಡಬೇಕೆಂದು ಬರೆದುಕೊಟ್ಟಿದ್ದರು.!!

ಇದರಿಂದಾಗಿ ಮಗುವಿನ ಆರೋಗ್ಯದ ಬಗ್ಗೆ ಆತಂಕಕ್ಕೀಡಾದ ಪೋಷಕರು ಮನೆಗೆ ಬಂದು ನೆರೆಹೊರೆಯವರಲ್ಲಿ ನೋವು ತೋಡಿಕೊಂಡಾಗ ಅದರಲ್ಲೊಬ್ಬರು “ಆ ಆಸ್ಪತ್ರೆಯ ವರದಿಗಳು ಅನೇಕ ಬಾರಿ ತಪ್ಪು ತಪ್ಪಾಗಿರುತ್ತವೆ. ಈ ಬಗ್ಗೆ ತಮಗೂ ಅನೇಕ ಬಾರಿ ಅನುಭವವಾಗಿದೆ ಎಂದು ಹೇಳಿದ ಕಾರಣ, ಮರುದಿನ ಮಗುವಿನ ಪೋಷಕರು ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ದು ಮತ್ತೆ ಥೈರಾಯಿಡ್ ಟೆಸ್ಟ್ ಮಾಡಿಸಿದ್ದಾರೆ.

ಆಗ ಅಲ್ಲಿನ ಲ್ಯಾಬ್ ವರದಿಗಳು ಮಗುವಿನ ಥೈರಾಯಿಡ್ ನಾರ್ಮಲ್ ಆಗಿದೆ ಎಂದು ವರದಿ ನೀಡಲಾಗಿ, ಮಗುವಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ವೈದ್ಯರು ಖಚಿತಪಡಿಸಿರುತ್ತಾರೆ.

ಈ ಬಗ್ಗೆ ಮಗುವಿನ ಪೋಷಕರು ಮತ್ತೆ ನೇರವಾಗಿ ಎಜೆ ಆಸ್ಪತ್ರೆಯಿಂದ ಮೊದಲು ತೆರಳಿದ್ದ ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಅಲ್ಲಿನ ವೈದ್ಯ “ಇದು ನನ್ನ ತಪ್ಪಲ್ಲ ಲ್ಯಾಬ್ ಸಿಬ್ಬಂದಿಯ ತಪ್ಪು” ಎಂದಿದ್ದು, ಲ್ಯಾಬ್ ಸಿಬ್ಬಂದಿಯನ್ನು ಪ್ರಶ್ನಿಸಿದಾಗ “ಇದು ನನ್ನ ತಪ್ಪಲ್ಲ ಥೈರಾಯಿಡ್ ಪರೀಕ್ಷಿಸುವ ಸಾಧನದ ತಪ್ಪು” ಎಂದು ತಪ್ಪನ್ನು ಮುಚ್ಚಿಕೊಳ್ಳಲು ಯತ್ನಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಪೋಷಕರು ಎಲ್ಲಾ ವೈದ್ಯಕೀಯ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಾಗ ಹೆದರಿದ ಆಸ್ಪತ್ರೆಯವರು ವಿಷಯವನ್ನು ಇಲ್ಲಿಯೇ ಸರಿಪಡಿಸಿ ಬಿಡೋಣ, ದಯವಿಟ್ಟು ಹೊರಗಡೆ ತಿಳಿಸಬೇಡಿ ಎಂದು ಮನವಿ ಮಾಡಿ ಮತ್ತೊಮ್ಮೆ ಮಗುವಿನ ರಕ್ತದ ಮಾದರಿಯನ್ನು ಸಂಗ್ರಹಿಸಿ ಥೈರಾಯಿಡ್ ಪರೀಕ್ಷೆ ನಡೆಸಿ ಎಲ್ಲವೂ ಸಹಜ ಸ್ಥಿತಿಯಲ್ಲೇ ಇರುವುದಾಗಿ ವರದಿ ನೀಡಿ ಕೈ ತೊಳೆದುಕೊಂಡಿದ್ದಾರೆ.

ಈ ಬಗ್ಗೆ ಮಗುವಿನ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಪ್ಪು ವರದಿ ನೀಡಿ ಮಗುವಿನ ಜೀವಕ್ಕೆ ಸಂಚಕಾರ ತರಲಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಿದ್ದು, ಖಾಸಗಿ ಆಸ್ಪತ್ರೆ ವಿರುದ್ಧ ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಕ್ತ ತನಿಖೆಗೆ ಆದೇಶಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search