• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಿಜೆಪಿ ವಿರುದ್ಧ 40% ಆರೋಪ ಮಾಡಿದ್ದ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ!

Tulunadu News Posted On September 19, 2024
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಸಚಿವರು, ಶಾಸಕರು 40% ಕಮೀಷನ್ ಕೇಳ್ತಾರೆ ಎಂದು ಆರೋಪ ಮಾಡಿ ನಿರಂತರವಾಗಿ ಮಾಧ್ಯಮಗಳಲ್ಲಿ ಸುದ್ದಿಯಲ್ಲಿದ್ದ ಡಿ ಕೆಂಪಣ್ಣ ಇಹಲೋಕ ತ್ಯಜಿಸಿದ್ದಾರೆ. ಕೆಂಪಣ್ಣ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದರು. ಕೆಂಪಣ್ಣ ಅವರು ಇಡೀ ರಾಜ್ಯ ಸರಕಾರವನ್ನೇ ಎದುರು ಹಾಕಿಕೊಂಡು ಹೋರಾಟ ನಡೆಸಿದ್ದರು. ಆದರೆ ಅವರ ಹೋರಾಟದಿಂದ ಸತ್ಯ ಹೊರಗೆ ಬಂತೋ ಇಲ್ವೋ ಅಂತಿಮವಾಗಿ ಜನರ ಮನಸ್ಸಿನಲ್ಲಿ ಸರಕಾರದ ವಿರುದ್ಧ ನಕರಾತ್ಮಕ ವಿಷಯ ಗಟ್ಟಿಯಾಗಿ ಬಿಜೆಪಿ ನಂತರದ ಚುನಾವಣೆಯಲ್ಲಿ ಸೋಲು ಕಾಣುವಂತಾಯಿತು. ಕೆಂಪಣ್ಣನವರ ಆರೋಪವನ್ನು ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ 2023 ರ ಚುನಾವಣೆಯಲ್ಲಿ ಅಭೂತಪೂರ್ವ ರೀತಿಯಲ್ಲಿ ಅಧಿಕಾರಕ್ಕೆ ಬಂದು ಈಗ ಒಂದೂಕಾಲು ವರ್ಷಕ್ಕಿಂತಲೂ ಹೆಚ್ಚು ಸಮಯ ಕಳೆದಿದೆ.

ಈಗಲೂ ರಾಜ್ಯದ ಗುತ್ತಿಗೆದಾರರು ಆಗಾಗ ಹಣ ಬಿಡುಗಡೆಗಾಗಿ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆವತ್ತು ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದು ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದ್ದರು. ಕೆಂಪಣ್ಣನವರ ಹೇಳಿಕೆಗಳು, ಧೈರ್ಯ ಮತ್ತು ಹೋರಾಟದ ಕಿಚ್ಚನ್ನು ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಅದನ್ನು ಸಮರ್ಪಕವಾಗಿ ಬಳಸಿತ್ತು. ಆಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನವನ್ನು ಕೂಡ ನಡೆಸಿದ ಕಾಂಗ್ರೆಸ್ಸಿಗರಿಗೆ ಅದು ಹೆಚ್ಚಿನ ಲಾಭವನ್ನು ತಂದುಕೊಟ್ಟಿತ್ತು. ಕೆಂಪಣ್ಣನವರು ತಮ್ಮ 83 ನೇ ವಯಸ್ಸಿನಲ್ಲಿ ಬೆಂಗಳೂರಿನ ತಮ್ಮ ನಿವಾಸದಿಂದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search