• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇಜ್ರಿವಾಲ್ ಕುಳಿತಿದ್ದ ಚೇರಿನಲ್ಲಿ ಕುಳಿತುಕೊಳ್ಳಲು ಒಪ್ಪದ ಆತಿಶಿ!

Tulunadu News Posted On September 23, 2024
0


0
Shares
  • Share On Facebook
  • Tweet It

ದೆಹಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ತಿಂಗಳು ಬಾಕಿ ಇರುವಾಗ ನೂತನ ಮುಖ್ಯಮಂತ್ರಿಯಾಗಿ ನೇಮಕವಾಗಿರುವ ಆತಿಶಿ ಮಾರ್ಲೆನಾ ಸಿಂಗ್ ಅವರು ಹೊಸ ವರಸೆಯೊಂದನ್ನು ಆರಂಭಿಸಿದ್ದಾರೆ. ತಾವು ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದಾಗ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ. ಅಷ್ಟಕ್ಕೂ ಆತಿಶಿ ಯಾಕೆ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರೆ ಅಲ್ಲಿ ಅವರಿಗೆ ಕೇಜ್ರಿವಾಲ್ ಅವರ ಮೇಲಿರುವ ಭಕ್ತಿಯೇ ಮುಖ್ಯವಾಗಿ ಕಾಣಿಸುತ್ತಿದೆ. ಆತಿಶಿ ಕೇಜ್ರಿವಾಲ್ ಅವರನ್ನು ಭಗವಂತ ಶ್ರೀರಾಮನಿಗೆ ಹೋಲಿಸಿದರೆ ತಮ್ಮನ್ನು ತಾವು ಭರತನಿಗೆ ಹೋಲಿಸಿದ್ದಾರೆ. ರಾಮ ವನವಾಸಕ್ಕೆ ಹೋಗುವಾಗ ಭರತ ರಾಮನ ಸಿಂಹಾಸನದಲ್ಲಿ ಕುಳಿತುಕೊಳ್ಳದೇ, ರಾಮ ವನವಾಸ ಮುಗಿಸಿ ಬಂದ ಬಳಿಕ ಅದನ್ನು ಹಾಗೇ ಬಿಟ್ಟುಕೊಟ್ಟಂತೆ ತಾನು ಹಾಗೇ ನಡೆದುಕೊಳ್ಳುವುದಾಗಿ ಆತಿಶಿ ತಿಳಿಸಿದ್ದಾರೆ. ಖಾಲಿ ಕುರ್ಚಿಯನ್ನು ಹಾಗೆಯೇ ಬಿಟ್ಟುಕೊಡುವ ಉದ್ದೇಶ ಆ ಕುರ್ಚಿಯ ಮೇಲೆ ಶೀಘ್ರದಲ್ಲಿ ಸಿಎಂ ಆಗಿ ಅರವಿಂದ ಕೇಜ್ರಿವಾಲ್ ಕುಳಿತುಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಆತಿಶಿ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರನ್ನು ರಾಮನಿಗೆ ಹೋಲಿಸಿದ್ದಕ್ಕೆ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ಷೇಪ ಎತ್ತಿದೆ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರನ್ನು ರಾಮನಿಗೆ ಹೋಲಿಸಿರುವುದನ್ನು ಖಂಡಿಸಿದೆ. ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದು ರಾಜಕೀಯ ಸ್ಟಂಟ್ ಎಂದು ಬಿಜೆಪಿ ಮುಖಂಡರು ಬಣ್ಣಿಸಿದ್ದಾರೆ. ಇಂತಹ ನಾಟಕವನ್ನು ದೆಹಲಿಯ ಜನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ಆದರೆ ಆತಿಶಿ ಮಾತ್ರ ಯಾವ ರೀತಿಯಲ್ಲಿ ಪ್ರಚಾರದಲ್ಲಿ ಸದಾ ಇರಬೇಕೆಂದು ನಿರ್ಧರಿಸಿದಂತೆ ಕಾಣುತ್ತದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search