• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇಜ್ರಿವಾಲ್ ಕುಳಿತಿದ್ದ ಚೇರಿನಲ್ಲಿ ಕುಳಿತುಕೊಳ್ಳಲು ಒಪ್ಪದ ಆತಿಶಿ!

Tulunadu News Posted On September 23, 2024
0


0
Shares
  • Share On Facebook
  • Tweet It

ದೆಹಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ತಿಂಗಳು ಬಾಕಿ ಇರುವಾಗ ನೂತನ ಮುಖ್ಯಮಂತ್ರಿಯಾಗಿ ನೇಮಕವಾಗಿರುವ ಆತಿಶಿ ಮಾರ್ಲೆನಾ ಸಿಂಗ್ ಅವರು ಹೊಸ ವರಸೆಯೊಂದನ್ನು ಆರಂಭಿಸಿದ್ದಾರೆ. ತಾವು ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದಾಗ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ. ಅಷ್ಟಕ್ಕೂ ಆತಿಶಿ ಯಾಕೆ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರೆ ಅಲ್ಲಿ ಅವರಿಗೆ ಕೇಜ್ರಿವಾಲ್ ಅವರ ಮೇಲಿರುವ ಭಕ್ತಿಯೇ ಮುಖ್ಯವಾಗಿ ಕಾಣಿಸುತ್ತಿದೆ. ಆತಿಶಿ ಕೇಜ್ರಿವಾಲ್ ಅವರನ್ನು ಭಗವಂತ ಶ್ರೀರಾಮನಿಗೆ ಹೋಲಿಸಿದರೆ ತಮ್ಮನ್ನು ತಾವು ಭರತನಿಗೆ ಹೋಲಿಸಿದ್ದಾರೆ. ರಾಮ ವನವಾಸಕ್ಕೆ ಹೋಗುವಾಗ ಭರತ ರಾಮನ ಸಿಂಹಾಸನದಲ್ಲಿ ಕುಳಿತುಕೊಳ್ಳದೇ, ರಾಮ ವನವಾಸ ಮುಗಿಸಿ ಬಂದ ಬಳಿಕ ಅದನ್ನು ಹಾಗೇ ಬಿಟ್ಟುಕೊಟ್ಟಂತೆ ತಾನು ಹಾಗೇ ನಡೆದುಕೊಳ್ಳುವುದಾಗಿ ಆತಿಶಿ ತಿಳಿಸಿದ್ದಾರೆ. ಖಾಲಿ ಕುರ್ಚಿಯನ್ನು ಹಾಗೆಯೇ ಬಿಟ್ಟುಕೊಡುವ ಉದ್ದೇಶ ಆ ಕುರ್ಚಿಯ ಮೇಲೆ ಶೀಘ್ರದಲ್ಲಿ ಸಿಎಂ ಆಗಿ ಅರವಿಂದ ಕೇಜ್ರಿವಾಲ್ ಕುಳಿತುಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಆತಿಶಿ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರನ್ನು ರಾಮನಿಗೆ ಹೋಲಿಸಿದ್ದಕ್ಕೆ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ಷೇಪ ಎತ್ತಿದೆ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರನ್ನು ರಾಮನಿಗೆ ಹೋಲಿಸಿರುವುದನ್ನು ಖಂಡಿಸಿದೆ. ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದು ರಾಜಕೀಯ ಸ್ಟಂಟ್ ಎಂದು ಬಿಜೆಪಿ ಮುಖಂಡರು ಬಣ್ಣಿಸಿದ್ದಾರೆ. ಇಂತಹ ನಾಟಕವನ್ನು ದೆಹಲಿಯ ಜನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ಆದರೆ ಆತಿಶಿ ಮಾತ್ರ ಯಾವ ರೀತಿಯಲ್ಲಿ ಪ್ರಚಾರದಲ್ಲಿ ಸದಾ ಇರಬೇಕೆಂದು ನಿರ್ಧರಿಸಿದಂತೆ ಕಾಣುತ್ತದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search