• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇಜ್ರಿವಾಲ್ ಕುಳಿತಿದ್ದ ಚೇರಿನಲ್ಲಿ ಕುಳಿತುಕೊಳ್ಳಲು ಒಪ್ಪದ ಆತಿಶಿ!

Tulunadu News Posted On September 23, 2024
0


0
Shares
  • Share On Facebook
  • Tweet It

ದೆಹಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ತಿಂಗಳು ಬಾಕಿ ಇರುವಾಗ ನೂತನ ಮುಖ್ಯಮಂತ್ರಿಯಾಗಿ ನೇಮಕವಾಗಿರುವ ಆತಿಶಿ ಮಾರ್ಲೆನಾ ಸಿಂಗ್ ಅವರು ಹೊಸ ವರಸೆಯೊಂದನ್ನು ಆರಂಭಿಸಿದ್ದಾರೆ. ತಾವು ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದಾಗ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ. ಅಷ್ಟಕ್ಕೂ ಆತಿಶಿ ಯಾಕೆ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರೆ ಅಲ್ಲಿ ಅವರಿಗೆ ಕೇಜ್ರಿವಾಲ್ ಅವರ ಮೇಲಿರುವ ಭಕ್ತಿಯೇ ಮುಖ್ಯವಾಗಿ ಕಾಣಿಸುತ್ತಿದೆ. ಆತಿಶಿ ಕೇಜ್ರಿವಾಲ್ ಅವರನ್ನು ಭಗವಂತ ಶ್ರೀರಾಮನಿಗೆ ಹೋಲಿಸಿದರೆ ತಮ್ಮನ್ನು ತಾವು ಭರತನಿಗೆ ಹೋಲಿಸಿದ್ದಾರೆ. ರಾಮ ವನವಾಸಕ್ಕೆ ಹೋಗುವಾಗ ಭರತ ರಾಮನ ಸಿಂಹಾಸನದಲ್ಲಿ ಕುಳಿತುಕೊಳ್ಳದೇ, ರಾಮ ವನವಾಸ ಮುಗಿಸಿ ಬಂದ ಬಳಿಕ ಅದನ್ನು ಹಾಗೇ ಬಿಟ್ಟುಕೊಟ್ಟಂತೆ ತಾನು ಹಾಗೇ ನಡೆದುಕೊಳ್ಳುವುದಾಗಿ ಆತಿಶಿ ತಿಳಿಸಿದ್ದಾರೆ. ಖಾಲಿ ಕುರ್ಚಿಯನ್ನು ಹಾಗೆಯೇ ಬಿಟ್ಟುಕೊಡುವ ಉದ್ದೇಶ ಆ ಕುರ್ಚಿಯ ಮೇಲೆ ಶೀಘ್ರದಲ್ಲಿ ಸಿಎಂ ಆಗಿ ಅರವಿಂದ ಕೇಜ್ರಿವಾಲ್ ಕುಳಿತುಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಆತಿಶಿ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರನ್ನು ರಾಮನಿಗೆ ಹೋಲಿಸಿದ್ದಕ್ಕೆ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ಷೇಪ ಎತ್ತಿದೆ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರನ್ನು ರಾಮನಿಗೆ ಹೋಲಿಸಿರುವುದನ್ನು ಖಂಡಿಸಿದೆ. ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದು ರಾಜಕೀಯ ಸ್ಟಂಟ್ ಎಂದು ಬಿಜೆಪಿ ಮುಖಂಡರು ಬಣ್ಣಿಸಿದ್ದಾರೆ. ಇಂತಹ ನಾಟಕವನ್ನು ದೆಹಲಿಯ ಜನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ಆದರೆ ಆತಿಶಿ ಮಾತ್ರ ಯಾವ ರೀತಿಯಲ್ಲಿ ಪ್ರಚಾರದಲ್ಲಿ ಸದಾ ಇರಬೇಕೆಂದು ನಿರ್ಧರಿಸಿದಂತೆ ಕಾಣುತ್ತದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search