• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇಜ್ರಿವಾಲ್ ಕುಳಿತಿದ್ದ ಚೇರಿನಲ್ಲಿ ಕುಳಿತುಕೊಳ್ಳಲು ಒಪ್ಪದ ಆತಿಶಿ!

Tulunadu News Posted On September 23, 2024
0


0
Shares
  • Share On Facebook
  • Tweet It

ದೆಹಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ತಿಂಗಳು ಬಾಕಿ ಇರುವಾಗ ನೂತನ ಮುಖ್ಯಮಂತ್ರಿಯಾಗಿ ನೇಮಕವಾಗಿರುವ ಆತಿಶಿ ಮಾರ್ಲೆನಾ ಸಿಂಗ್ ಅವರು ಹೊಸ ವರಸೆಯೊಂದನ್ನು ಆರಂಭಿಸಿದ್ದಾರೆ. ತಾವು ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದಾಗ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ. ಅಷ್ಟಕ್ಕೂ ಆತಿಶಿ ಯಾಕೆ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರೆ ಅಲ್ಲಿ ಅವರಿಗೆ ಕೇಜ್ರಿವಾಲ್ ಅವರ ಮೇಲಿರುವ ಭಕ್ತಿಯೇ ಮುಖ್ಯವಾಗಿ ಕಾಣಿಸುತ್ತಿದೆ. ಆತಿಶಿ ಕೇಜ್ರಿವಾಲ್ ಅವರನ್ನು ಭಗವಂತ ಶ್ರೀರಾಮನಿಗೆ ಹೋಲಿಸಿದರೆ ತಮ್ಮನ್ನು ತಾವು ಭರತನಿಗೆ ಹೋಲಿಸಿದ್ದಾರೆ. ರಾಮ ವನವಾಸಕ್ಕೆ ಹೋಗುವಾಗ ಭರತ ರಾಮನ ಸಿಂಹಾಸನದಲ್ಲಿ ಕುಳಿತುಕೊಳ್ಳದೇ, ರಾಮ ವನವಾಸ ಮುಗಿಸಿ ಬಂದ ಬಳಿಕ ಅದನ್ನು ಹಾಗೇ ಬಿಟ್ಟುಕೊಟ್ಟಂತೆ ತಾನು ಹಾಗೇ ನಡೆದುಕೊಳ್ಳುವುದಾಗಿ ಆತಿಶಿ ತಿಳಿಸಿದ್ದಾರೆ. ಖಾಲಿ ಕುರ್ಚಿಯನ್ನು ಹಾಗೆಯೇ ಬಿಟ್ಟುಕೊಡುವ ಉದ್ದೇಶ ಆ ಕುರ್ಚಿಯ ಮೇಲೆ ಶೀಘ್ರದಲ್ಲಿ ಸಿಎಂ ಆಗಿ ಅರವಿಂದ ಕೇಜ್ರಿವಾಲ್ ಕುಳಿತುಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಆತಿಶಿ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರನ್ನು ರಾಮನಿಗೆ ಹೋಲಿಸಿದ್ದಕ್ಕೆ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ಷೇಪ ಎತ್ತಿದೆ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರನ್ನು ರಾಮನಿಗೆ ಹೋಲಿಸಿರುವುದನ್ನು ಖಂಡಿಸಿದೆ. ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದು ರಾಜಕೀಯ ಸ್ಟಂಟ್ ಎಂದು ಬಿಜೆಪಿ ಮುಖಂಡರು ಬಣ್ಣಿಸಿದ್ದಾರೆ. ಇಂತಹ ನಾಟಕವನ್ನು ದೆಹಲಿಯ ಜನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ಆದರೆ ಆತಿಶಿ ಮಾತ್ರ ಯಾವ ರೀತಿಯಲ್ಲಿ ಪ್ರಚಾರದಲ್ಲಿ ಸದಾ ಇರಬೇಕೆಂದು ನಿರ್ಧರಿಸಿದಂತೆ ಕಾಣುತ್ತದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search