• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಶಾಸಕಿ, ಮಾಜಿ ಸಂಸದರ ಪುತ್ರನ ಜಾಗಕ್ಕೂ ವಕ್ಫ್ ಆತಂಕ!

Tulunadu News Posted On October 31, 2024
0


0
Shares
  • Share On Facebook
  • Tweet It

ಉತ್ತರ ಕರ್ನಾಟಕದ ಅನೇಕ ರೈತರ ಭೂಮಿ ವಕ್ಫ್ ಬೋರ್ಡಿನದ್ದು ಎನ್ನುವ ವಿಷಯ ಈಗಾಗಲೇ ಸಾಕಷ್ಟು ಚರ್ಚೆ, ಹೋರಾಟ, ವಾದ, ವಿವಾದಗಳಿಗೆ ಕಾರಣವಾಗುತ್ತಿದ್ದಂತೆ ಈಗ ಈ ವಿಷಯ ಅಕ್ಷರಶ: ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಯ ಮನೆಬಾಗಿಲಿನ ತನಕ ಬಂದಿರುವುದು ನಿಜಕ್ಕೂ ಕುತೂಹಲಕರ ವಿಷಯವಾಗಿದೆ. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳ ರೈತರ ಭೂಮಿಯ ಹಕ್ಕಿನ ವಿಷಯದಲ್ಲಿ ಈಗಾಗಲೇ ಗೊಂದಲ ಏರ್ಪಟ್ಟಿದ್ದು, ಅಲ್ಲಿನ ಸ್ಥಳೀಯ ಜಿಲ್ಲಾಡಳಿತ, ರಾಜ್ಯ ಸರಕಾರ ಮತ್ತು ವಿಪಕ್ಷಗಳ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.  ಇಲ್ಲಿಯ ತನಕ ರೈತರು ಈ ವಿಷಯದಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ ಈಗ ಬಿಜೆಪಿಯ ಪ್ರತಿಷ್ಟಿತ ಕುಟುಂಬದ ಬುಡಕ್ಕೆ ವಕ್ಫ್ ಭೂಮಿಯ ವಿವಾದ ಬಂದಂತೆ ಕಾಣುತ್ತಿದೆ. ಚಿಕ್ಕೋಡಿಯ ಜೊಲ್ಲೆ ಕುಟುಂಬ ಗೊತ್ತಿಲ್ಲದವರು ಯಾರೂ ಇಲ್ಲ. ರಾಜಕೀಯವಾಗಿ, ಸಾಮಾಜಿಕವಾಗಿ ಪ್ರಬಲ ಪ್ರಭಾವಿ ಕುಟುಂಬವದು. ಅಂತಹ ಕುಟುಂಬದ ಸದಸ್ಯರಿಗೂ ಈಗ ವಕ್ಫ್ ಬಿಸಿ ತಟ್ಟಿದೆ.
ಚಿಕ್ಕೋಡಿಯ ಜೊಲ್ಲೆ ಕುಟುಂಬದ ಜಮೀನಿನಲ್ಲಿಯೂ ವಕ್ಫ್ ಹೆಸರು ನಮೂದಿಸಿದೆ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಪುತ್ರ ಬಸವಪ್ರಸಾದ ಅವರ ಹೆಸರಿನಲ್ಲಿರುವ ಜಮೀನು ವಕ್ಫ್ ಬೋರ್ಡಿಗೆ ಸೇರಿದ್ದು ಎಂದು ಹೆಸರಿಸಲಾಗಿದೆ. ಸ್ವಗ್ರಾಮ ಯಕ್ಸಂಬಾ ಗ್ರಾಮದ ಜಮೀನು ಮತ್ತು ಅದರೊಂದಿಗೆ ಜೊಲ್ಲೆ ಕುಟುಂಬದ ಹಲವು ಜನರ ಜಮೀನಿಗೂ ಇದೀಗ ಆತಂಕ ಎದುರಾಗಿದೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ಹಲವಾರು ರೈತರ ಜಮೀನಿಗೆ ವಕ್ಫ್ ಹೆಸರು ನಮೂದು ಮಾಡಲಾಗಿದೆ. ಇಲ್ಲಿಯ ತನಕ ಕೃಷಿಕರ, ಜನಸಾಮಾನ್ಯರ ಜಮೀನುಗಳು ಮಾತ್ರ ವಕ್ಫ್ ಬೋರ್ಡಿನ ಹೆಸರಿಗೆ ನಮೂದನೆಯಾಗಿದ್ದು, ಈಗ ಪ್ರಭಾವಿಗಳ ಭೂಮಿಯೂ ಅದೇ ದಾರಿಯಲ್ಲಿ ಸಾಗುತ್ತಿರುವುದು ಈ ಒಟ್ಟು ಪ್ರಕರಣವನ್ನು ಇನ್ನಷ್ಟು ಕಗ್ಗಂಟಾಗಿ ಪರಿವರ್ತಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search