• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಶಾಸಕಿ, ಮಾಜಿ ಸಂಸದರ ಪುತ್ರನ ಜಾಗಕ್ಕೂ ವಕ್ಫ್ ಆತಂಕ!

Tulunadu News Posted On October 31, 2024
0


0
Shares
  • Share On Facebook
  • Tweet It

ಉತ್ತರ ಕರ್ನಾಟಕದ ಅನೇಕ ರೈತರ ಭೂಮಿ ವಕ್ಫ್ ಬೋರ್ಡಿನದ್ದು ಎನ್ನುವ ವಿಷಯ ಈಗಾಗಲೇ ಸಾಕಷ್ಟು ಚರ್ಚೆ, ಹೋರಾಟ, ವಾದ, ವಿವಾದಗಳಿಗೆ ಕಾರಣವಾಗುತ್ತಿದ್ದಂತೆ ಈಗ ಈ ವಿಷಯ ಅಕ್ಷರಶ: ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಯ ಮನೆಬಾಗಿಲಿನ ತನಕ ಬಂದಿರುವುದು ನಿಜಕ್ಕೂ ಕುತೂಹಲಕರ ವಿಷಯವಾಗಿದೆ. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳ ರೈತರ ಭೂಮಿಯ ಹಕ್ಕಿನ ವಿಷಯದಲ್ಲಿ ಈಗಾಗಲೇ ಗೊಂದಲ ಏರ್ಪಟ್ಟಿದ್ದು, ಅಲ್ಲಿನ ಸ್ಥಳೀಯ ಜಿಲ್ಲಾಡಳಿತ, ರಾಜ್ಯ ಸರಕಾರ ಮತ್ತು ವಿಪಕ್ಷಗಳ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.  ಇಲ್ಲಿಯ ತನಕ ರೈತರು ಈ ವಿಷಯದಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ ಈಗ ಬಿಜೆಪಿಯ ಪ್ರತಿಷ್ಟಿತ ಕುಟುಂಬದ ಬುಡಕ್ಕೆ ವಕ್ಫ್ ಭೂಮಿಯ ವಿವಾದ ಬಂದಂತೆ ಕಾಣುತ್ತಿದೆ. ಚಿಕ್ಕೋಡಿಯ ಜೊಲ್ಲೆ ಕುಟುಂಬ ಗೊತ್ತಿಲ್ಲದವರು ಯಾರೂ ಇಲ್ಲ. ರಾಜಕೀಯವಾಗಿ, ಸಾಮಾಜಿಕವಾಗಿ ಪ್ರಬಲ ಪ್ರಭಾವಿ ಕುಟುಂಬವದು. ಅಂತಹ ಕುಟುಂಬದ ಸದಸ್ಯರಿಗೂ ಈಗ ವಕ್ಫ್ ಬಿಸಿ ತಟ್ಟಿದೆ.
ಚಿಕ್ಕೋಡಿಯ ಜೊಲ್ಲೆ ಕುಟುಂಬದ ಜಮೀನಿನಲ್ಲಿಯೂ ವಕ್ಫ್ ಹೆಸರು ನಮೂದಿಸಿದೆ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಪುತ್ರ ಬಸವಪ್ರಸಾದ ಅವರ ಹೆಸರಿನಲ್ಲಿರುವ ಜಮೀನು ವಕ್ಫ್ ಬೋರ್ಡಿಗೆ ಸೇರಿದ್ದು ಎಂದು ಹೆಸರಿಸಲಾಗಿದೆ. ಸ್ವಗ್ರಾಮ ಯಕ್ಸಂಬಾ ಗ್ರಾಮದ ಜಮೀನು ಮತ್ತು ಅದರೊಂದಿಗೆ ಜೊಲ್ಲೆ ಕುಟುಂಬದ ಹಲವು ಜನರ ಜಮೀನಿಗೂ ಇದೀಗ ಆತಂಕ ಎದುರಾಗಿದೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ಹಲವಾರು ರೈತರ ಜಮೀನಿಗೆ ವಕ್ಫ್ ಹೆಸರು ನಮೂದು ಮಾಡಲಾಗಿದೆ. ಇಲ್ಲಿಯ ತನಕ ಕೃಷಿಕರ, ಜನಸಾಮಾನ್ಯರ ಜಮೀನುಗಳು ಮಾತ್ರ ವಕ್ಫ್ ಬೋರ್ಡಿನ ಹೆಸರಿಗೆ ನಮೂದನೆಯಾಗಿದ್ದು, ಈಗ ಪ್ರಭಾವಿಗಳ ಭೂಮಿಯೂ ಅದೇ ದಾರಿಯಲ್ಲಿ ಸಾಗುತ್ತಿರುವುದು ಈ ಒಟ್ಟು ಪ್ರಕರಣವನ್ನು ಇನ್ನಷ್ಟು ಕಗ್ಗಂಟಾಗಿ ಪರಿವರ್ತಿಸಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search