• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಶಾಸಕಿ, ಮಾಜಿ ಸಂಸದರ ಪುತ್ರನ ಜಾಗಕ್ಕೂ ವಕ್ಫ್ ಆತಂಕ!

Tulunadu News Posted On October 31, 2024
0


0
Shares
  • Share On Facebook
  • Tweet It

ಉತ್ತರ ಕರ್ನಾಟಕದ ಅನೇಕ ರೈತರ ಭೂಮಿ ವಕ್ಫ್ ಬೋರ್ಡಿನದ್ದು ಎನ್ನುವ ವಿಷಯ ಈಗಾಗಲೇ ಸಾಕಷ್ಟು ಚರ್ಚೆ, ಹೋರಾಟ, ವಾದ, ವಿವಾದಗಳಿಗೆ ಕಾರಣವಾಗುತ್ತಿದ್ದಂತೆ ಈಗ ಈ ವಿಷಯ ಅಕ್ಷರಶ: ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಯ ಮನೆಬಾಗಿಲಿನ ತನಕ ಬಂದಿರುವುದು ನಿಜಕ್ಕೂ ಕುತೂಹಲಕರ ವಿಷಯವಾಗಿದೆ. ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳ ರೈತರ ಭೂಮಿಯ ಹಕ್ಕಿನ ವಿಷಯದಲ್ಲಿ ಈಗಾಗಲೇ ಗೊಂದಲ ಏರ್ಪಟ್ಟಿದ್ದು, ಅಲ್ಲಿನ ಸ್ಥಳೀಯ ಜಿಲ್ಲಾಡಳಿತ, ರಾಜ್ಯ ಸರಕಾರ ಮತ್ತು ವಿಪಕ್ಷಗಳ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.  ಇಲ್ಲಿಯ ತನಕ ರೈತರು ಈ ವಿಷಯದಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ ಈಗ ಬಿಜೆಪಿಯ ಪ್ರತಿಷ್ಟಿತ ಕುಟುಂಬದ ಬುಡಕ್ಕೆ ವಕ್ಫ್ ಭೂಮಿಯ ವಿವಾದ ಬಂದಂತೆ ಕಾಣುತ್ತಿದೆ. ಚಿಕ್ಕೋಡಿಯ ಜೊಲ್ಲೆ ಕುಟುಂಬ ಗೊತ್ತಿಲ್ಲದವರು ಯಾರೂ ಇಲ್ಲ. ರಾಜಕೀಯವಾಗಿ, ಸಾಮಾಜಿಕವಾಗಿ ಪ್ರಬಲ ಪ್ರಭಾವಿ ಕುಟುಂಬವದು. ಅಂತಹ ಕುಟುಂಬದ ಸದಸ್ಯರಿಗೂ ಈಗ ವಕ್ಫ್ ಬಿಸಿ ತಟ್ಟಿದೆ.
ಚಿಕ್ಕೋಡಿಯ ಜೊಲ್ಲೆ ಕುಟುಂಬದ ಜಮೀನಿನಲ್ಲಿಯೂ ವಕ್ಫ್ ಹೆಸರು ನಮೂದಿಸಿದೆ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಪುತ್ರ ಬಸವಪ್ರಸಾದ ಅವರ ಹೆಸರಿನಲ್ಲಿರುವ ಜಮೀನು ವಕ್ಫ್ ಬೋರ್ಡಿಗೆ ಸೇರಿದ್ದು ಎಂದು ಹೆಸರಿಸಲಾಗಿದೆ. ಸ್ವಗ್ರಾಮ ಯಕ್ಸಂಬಾ ಗ್ರಾಮದ ಜಮೀನು ಮತ್ತು ಅದರೊಂದಿಗೆ ಜೊಲ್ಲೆ ಕುಟುಂಬದ ಹಲವು ಜನರ ಜಮೀನಿಗೂ ಇದೀಗ ಆತಂಕ ಎದುರಾಗಿದೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ಹಲವಾರು ರೈತರ ಜಮೀನಿಗೆ ವಕ್ಫ್ ಹೆಸರು ನಮೂದು ಮಾಡಲಾಗಿದೆ. ಇಲ್ಲಿಯ ತನಕ ಕೃಷಿಕರ, ಜನಸಾಮಾನ್ಯರ ಜಮೀನುಗಳು ಮಾತ್ರ ವಕ್ಫ್ ಬೋರ್ಡಿನ ಹೆಸರಿಗೆ ನಮೂದನೆಯಾಗಿದ್ದು, ಈಗ ಪ್ರಭಾವಿಗಳ ಭೂಮಿಯೂ ಅದೇ ದಾರಿಯಲ್ಲಿ ಸಾಗುತ್ತಿರುವುದು ಈ ಒಟ್ಟು ಪ್ರಕರಣವನ್ನು ಇನ್ನಷ್ಟು ಕಗ್ಗಂಟಾಗಿ ಪರಿವರ್ತಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search