• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

24 ವರ್ಷದ ಯುವತಿಯಿಂದ ಯೋಗಿ ಆದಿತ್ಯನಾಥ್ ಹತ್ಯಾ ಬೆದರಿಕೆ!

Tulunadu News Posted On November 4, 2024
0


0
Shares
  • Share On Facebook
  • Tweet It

ಇತ್ತೀಚಿಗಷ್ಟೇ ಬಾಬಾ ಸಿದ್ಧಿಕಿ ಎನ್ನುವ ಮಹಾರಾಷ್ಟ್ರದ ಶಾಸಕನನ್ನು ಬಿಷ್ಣೋಯಿ ಗ್ಯಾಂಗ್ ಸದಸ್ಯರು ಎಂದು ಹೇಳಲಾಗುವ ಕೆಲವು ಶಾರ್ಪ್ ಶೂಟರ್ ಗಳು ಹತ್ಯೆ ಮಾಡಿದ ವಿಷಯ ಇನ್ನೂ ಹಸಿಯಾಗಿರುವಾಗಲೇ ಅದೇ ಮಾದರಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಹಾಗೆ ಮುಖ್ಯಮಂತ್ರಿಗಳನ್ನೇ ಮುಗಿಸುವುದಾಗಿ ಹೇಳಿರುವ ವ್ಯಕ್ತಿ ಯಾರೆಂದು ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಾಗ ಗೊತ್ತಾಗಿರುವುದು ಏನೆಂದರೆ ಬೆದರಿಕೆ ನೀಡಿದ್ದು ಓರ್ವ ಯುವತಿ. ಆಕೆಯ ವಯಸ್ಸು 24. ಇನ್ನು ಆಕೆಯ ಹೆಸರು ಫಾತಿಮಾ ಖಾನ್. ಫಾತಿಮಾ ಖಾನ್ ಸಾಫ್ಟವೇರ್ ತಂತ್ರಜ್ಞಾನದಲ್ಲಿ ಪದವಿ ಹೊಂದಿದ್ದು ಥಾನೆ ಜಿಲ್ಲೆಯ ಉಲ್ಲಾಸ್ ನಗರದಲ್ಲಿ ವಾಸಿಸುತ್ತಿದ್ದಾಳೆ.

ಸದ್ಯ ಮುಂಬೈ ಪೊಲೀಸರು ಆಕೆ ಮಾನಸಿಕ ಸ್ಥಿಮಿತ ಸರಿಯಿಲ್ಲ ಎನ್ನುವ ವಿಷಯವನ್ನು ಬಹಿರಂಗಪಡಿಸಿದ್ದು, ಅವಳ ತಂದೆ ಟಿಂಬರ್ ಕಾರ್ಖಾನೆಯನ್ನು ಉದ್ಯೋಗಿಯಾಗಿದ್ದಾರೆ ಎನ್ನುವ ವಿಷಯವನ್ನು ಪತ್ತೆ ಹಚ್ಚಿದ್ದಾರೆ. ಮುಂಬೈ ಪೊಲೀಸರ ವಾಟ್ಸಪ್ ನಂಬರಿಗೆ ಬಂದ ಸಂದೇಶದಲ್ಲಿ ಮುಂದಿನ ಹತ್ತು ದಿನಗಳ ಒಳಗೆ ಯೋಗಿ ಆದಿತ್ಯನಾಥ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದಿದ್ದರೆ ಅವರನ್ನು ಬಾಬಾ ಸಿದ್ದೀಕಿ ಹತ್ಯಾ ಶೈಲಿಯಲ್ಲಿಯೇ ಮುಗಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಆ ವಾಟ್ಸಪ್ ಸಂದೇಶ ಅಜ್ಞಾತ ಸಂಖ್ಯೆಯಿಂದ ಬಂದಿತ್ತು. ಆ ಸಂದೇಶದ ಬೆನ್ನು ಹಿಡಿದ ಮುಂಬೈ ಭಯೋತ್ಪಾದಕ ನಿಗ್ರಹ ದಳ ಮತ್ತು ಉಲ್ಲಾಸ್ ನಗರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆ ಯುವತಿಯ ಇರುವಿಕೆಯ ಜಾಡನ್ನು ಪತ್ತೆಹಚ್ಚಿದ್ದಾರೆ. ಸದ್ಯ ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿದ್ದು, ಮಹಾರಾಷ್ಟ್ರದಲ್ಲಿ ಚುನಾವಣೆ ಸನ್ನಿಹಿತವಾಗಿದ್ದು, ಯೋಗಿ ಆದಿತ್ಯನಾಥ್ ಅವರು ಈ ತಿಂಗಳು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search