• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಅಸೆಂಬ್ಲಿಯಲ್ಲಿ ಆರ್ಟಿಕಲ್ 370 ಮರುಸ್ಥಾಪನೆಗೆ ಒತ್ತಾಯ!

Tulunadu News Posted On November 5, 2024
0


0
Shares
  • Share On Facebook
  • Tweet It

ಹತ್ತು ವರುಷಗಳ ಬಳಿಕ ಚುನಾವಣೆಯನ್ನು ಕಂಡಿರುವ ಕಣಿವೆ ರಾಜ್ಯ ಜಮ್ಮು – ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಅಧಿಕಾರವನ್ನು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಮರುಸ್ಥಾಪಿಸುವುದಾಗಿ ಭಾರತೀಯ ಜನತಾ ಪಾರ್ಟಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದವು.

ಈಗ ಚುನಾವಣೆ ಮುಗಿದು ಮೊದಲ ಅಧಿವೇಶನ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಮೊದಲ ದಿನವೇ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕಾಗಿ ಒತ್ತಾಯ ಪಿಡಿಪಿ ಶಾಸಕರಿಂದ ಕೇಳಿಬಂದಿದೆ. ಪಿಡಿಪಿ ಶಾಸಕ ವಾಹಿದ್ ಪರ್ಯಾ 370 ನೇ ವಿಧಿ ಮರುಸ್ಥಾಪನೆಗೆ ನಿರ್ಣಯ ಮಂಡಿಸಿದರು. ಈ ಗೊತ್ತುವಳಿಯನ್ನು ಬಿಜೆಪಿ ಶಾಸಕರು ವಿರೋಧಿಸಿ ಪರ್ಯಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ ಘಟನೆಯೂ ನಡೆದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ರಹೀಮ್ ರಾಥರ್ ಈ ಗೊತ್ತುವಳಿಯನ್ನು ಚರ್ಚೆಗೆ ಅಂಗೀಕರಿಸಿಲ್ಲ ಎಂದರು. ಬಳಿಕ ಮಾತನಾಡಿದ ಸಿಎಂ ಒಮರ್ ಅಬ್ದುಲ್ಲಾ ” 370 ನೇ ವಿಧಿ ರದ್ದತಿಯನ್ನು ಜನ ಒಪ್ಪಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ತಿಳಿದುಬಂದಿದೆ. ಆದರೆ ಪಿಡಿಪಿ ಮಂಡಿಸಿದ ಗೊತ್ತುವಳಿಗೆ ಅರ್ಥವಿಲ್ಲ. ಆ ಪಕ್ಷ ಕೇವಲ ಪ್ರಚಾರಕ್ಕೋಸ್ಕರ ನಿರ್ಣಯ ಮಂಡಿಸಿದೆ. ಮಂಡಿಸುವ ಉದ್ದೇಶ ಇದ್ದರೆ ನಮ್ಮ ಜತೆ ಚರ್ಚಿಸಬೇಕಿತ್ತು ಎಂದರು. ಒಟ್ಟಿನಲ್ಲಿ ನಿರೀಕ್ಷೆಯಂತೆ 370 ನೇ ವಿಧಿ ಮತ್ತೆ ಜಾರಿಗೆ ತರುವ ವಿಷಯದಲ್ಲಿ ಮೈಲೇಜ್ ತೆಗೆದುಕೊಳ್ಳಲು ಪಿಡಿಪಿ ಪ್ರಯತ್ನಪಡುತ್ತಿದ್ದರೆ, ಇತ್ತ ಬೂದಿ ಮುಚ್ಚಿದ ಕೆಂಡವನ್ನು ಕೈಯಲ್ಲಿ ಹಿಡಿಯಲು ಆಡಳಿತರೂಢ ನ್ಯಾಶನಲ್ ಕಾನ್ಪರೆನ್ಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search